‘ಭಾರತ್‌ ಅಕ್ಕಿ’ಗಾಗಿ ಕೋಲಾರದಲ್ಲಿ ಜನರ ಕ್ಯೂ, ನೂಕುನುಗ್ಗಲು; ಇಲ್ಲಿದೆ ವಿಡಿಯೋ

Edited By: ಕಿರಣ್ ಹನುಮಂತ್​ ಮಾದಾರ್

Updated on: Feb 10, 2024 | 8:04 PM

ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಬಸ್ ನಿಲ್ದಾಣದ ಬಳಿ ಭಾರತ್ ಅಕ್ಕಿ(bharat brand rice) ಪಡೆಯಲು ಜನರು ಮುಗಿಬಿದ್ದ ಘಟನೆ ನಡೆದಿದೆ. ಇಂದು ಕೋಲಾರ (Kolar) ನಗರದ ಡೂಂ‌ ಲೈಟ್ ಸರ್ಕಲ್​ನಲ್ಲಿ ಭಾರತ್ ಅಕ್ಕಿ ವಿತರಣೆ ಮಾಡಲಾಗಿದ್ದು, ಜನರು ಅಕ್ಕಿ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಈ ವೇಳೆ ನೂಕು ನುಗ್ಗಲು ಏರ್ಪಟ್ಟಿದೆ.

ಕೋಲಾರ, ಫೆ.10: ಕೇಂದ್ರ ಸರ್ಕಾರದ ಭಾರತ್  ಬ್ರ್ಯಾಂಡ್ ಅಕ್ಕಿ (Bharat Brand Rice)ಯೋಜನೆಗೆ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ಫೆಬ್ರವರಿ 06 ರಂದು ಚಾಲನೆ‌ ನೀಡಿದ್ದರು. ಅದರಂತೆ  ‘ಭಾರತ್‌’ ಅಕ್ಕಿಗಾಗಿ ಕೋಲಾರದ ಡೂಂ ಲೈಟ್‌ ಸರ್ಕಲ್‌ನಲ್ಲಿ ಬಿಜೆಪಿಯಿಂದ ಅಕ್ಕಿ ವಿತರಣೆ ಮಾಡಲಾಗುತ್ತಿದೆ. ಈ ಹಿನ್ನಲೆ ಅಕ್ಕಿಗಾಗಿ ಜನರ ಕ್ಯೂ ನಿಂತಿದ್ದು, ನೂಕುನುಗ್ಗಲು ಏರ್ಪಟ್ಟಿದೆ. ಪ್ರತಿ ಕೆ.ಜಿ.ಗೆ 29 ರೂ.ನಂತೆ 10 ಕೆ.ಜಿ ಅಕ್ಕಿಯ ಬ್ಯಾಗ್‌ ವಿತರಣೆ ಮಾಡಲಾಗುತ್ತಿದ್ದು, ಕಡಿಮೆ ದರದ ‘ಭಾರತ್‌’ ಅಕ್ಕಿ ಪಡೆಯಲು ಜನರ ಹರಸಾಹಸ ಪಡುವಂತಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More