ಸಿದ್ದಿ ಸಮುದಾಯದ ಜೊತೆ ಸರಳತೆಯ ಪಾಠ ಕಲಿತ ‘ಭರ್ಜರಿ ಬ್ಯಾಚುಲರ್ಸ್’

Updated on: May 09, 2025 | 10:59 AM

‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ನಡೆಯುತ್ತಿದೆ. ಜೀ ಕನ್ನಡದಲ್ಲಿ ಈ ಶೋ ಪ್ರಸಾರ ಕಾಣುತ್ತಿದೆ. ಇಷ್ಟು ದಿನ ಒಳಾಂಗಣದಲ್ಲಿ ಶೋ ನಡೆಯುತ್ತಾ ಇತ್ತು. ಈಗ ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಹಳ್ಳಿಗೆ ಹೋಗಿ ಶೂಟ್ ಮಾಡಿದೆ. ಈ ಸಂದರ್ಭದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿವೆ.

‘ಭರ್ಜರಿ ಬ್ಯಾಚುಲರ್ಸ್​ ಸೀಸನ್ 2’ (Bharjari Bachelors season 2) ಇಷ್ಟು ದಿನ ಒಳಂಗಾಣದಲ್ಲಿ ಶೂಟ್ ಆಗುತ್ತಿತ್ತು. ಆದರೆ, ಈ ಬಾರಿ ಇವರೆಲ್ಲರೂ ಹಳ್ಳಿ ಜೀವನಕ್ಕೆ ಒಗ್ಗಿಕೊಂಡಿದ್ದಾರೆ. ಹೌದು, ಯಲ್ಲಾಪುರದ ಹಳ್ಳಿಯೊಂದಕ್ಕೆ ತೆರಳಿ ಸಿದ್ದಿ ಸಮುದಾಯದವರ ಜೊತೆ ಜೀವನ ನಡೆಸಿದ್ದಾರೆ. ಇವರ ಜೊತೆ ರವಿಚಂದ್ರನ್ ಹಾಗೂ ರಚಿತಾ ರಾಮ್ ಕೂಡ ಇದ್ದರು. ಹಳ್ಳಿ ಜೀವನ ನಡೆಸಿ ಎಲ್ಲರೂ ಖುಷಿ ಆಗಿದ್ದಾರೆ. ಇದು ‘ಪ್ಯಾಟೆ ಮಂದಿ ಕಾಡಿಗ್ ಬಂದ್ರು’ ದಿನಗಳನ್ನು ನೆನಪಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More