ಹಾಸನಾಂಬೆಯ ದರ್ಶನಕ್ಕೆ ಪತಿಯೊಂದಿಗೆ ಆಗಮಿಸಿದ ಭವಾನಿ ರೇವಣ್ಣ ಜನರ ಗಮನ ತಮ್ಮತ್ತ ಸೆಳೆದುಕೊಂಡರು!

ಜನ ಅವರನ್ನು ನೋಡಿದಾಕ್ಷಣ ಅಕ್ಕಾ ಅಕ್ಕಾ ಅಂತ ದುಂಬಾಲು ಬೀಳುತ್ತಾರೆ. ದೇವಿಯ ದರ್ಶನಕ್ಕಾಗಿ ಸಾಲಲ್ಲಿ ನಿಂತಿರುವ ಜನ ಸಹ ಭವಾನಿ ಅವರಿಗೆ ಕೈಮುಗಿದು ನಮಸ್ಕರಿಸುವುದನ್ನು ನೋಡಬಹುದು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿ ಸ್ವರೂಪ್ ಗೆಲುವಿಗೆ ಭವಾನಿ ನಡೆಸಿದ ಪ್ರಚಾರ ನಿರ್ಣಾಯಕವಾಗಿತ್ತು ಅಂತ ಕನ್ನಡಿಗರಿಗೆಲ್ಲ ಗೊತ್ತು.

ಹಾಸನಾಂಬೆಯ ದರ್ಶನಕ್ಕೆ ಪತಿಯೊಂದಿಗೆ ಆಗಮಿಸಿದ ಭವಾನಿ ರೇವಣ್ಣ ಜನರ ಗಮನ ತಮ್ಮತ್ತ ಸೆಳೆದುಕೊಂಡರು!
|

Updated on: Nov 10, 2023 | 12:11 PM

ಹಾಸನ: ಹಾಸನ ಜಿಲ್ಲೆಯಲ್ಲಿ ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ (HD Revanna) ಅವರ ಧರ್ಮಪತ್ನಿ ಭವಾನಿ ರೇವಣ್ಣ (HD Revanna) ಗತ್ತೇ ಹಾಗೆ ಮಾರಾಯ್ರೇ. ಅವರಿದ್ದಲ್ಲಿ ಅಭಿಮಾನಿಗಳು ಮುಕ್ಕುರುತ್ತಾರೆ, ಮಾಧ್ಯಮದವರನ್ನು ಅವರು ತಮ್ಮತ್ತ ಸೆಳೆದುಕೊಂಡು ಬಿಡುತ್ತಾರೆ. ಹಾಗೆ ನೋಡಿದರೆ ಭವಾನಿ ಈಗ ಯಾವುದೇ ಹುದ್ದೆಯಲ್ಲಿಲ್ಲ, ಹಿಂದೆ ಅವರು ಜಿಲ್ಲಾ ಪಂಚಾಯತ್ (Zilla Panchayat) ಸದಸ್ಯರಾಗಿದ್ದರು. ಆದರೆ, ಒಬ್ಬ ಜನಪ್ರಿಯ ಶಾಸಕನಿಗಿಂತ ಹೆಚ್ಚು ಅಭಿಮಾನಿ ಮತ್ತು ಬೆಂಬಲಿಗರು ಅವರಿಗಿದ್ದಾರೆ. ಇವತ್ತು ಅವರು ಪತಿ ರೇವಣ್ಣ ಅವರೊಂದಿಗೆ ಹಾಸನಾಂಬೆ ದರ್ಶನಕ್ಕೆ ಬಂದ ದೃಶ್ಯಗಳನ್ನು ನೋಡಿ. ಜರತಾರಿ ಸಿರೆಯುಟ್ಟು ಕತ್ತಲ್ಲಿ ಕಾಸಿನ ಸರ ತಲೆಗೆ ಕನಕಾಂಬರ ಹೂ ಮುಡಿದು ಜನರ ನಡುವೆ ಅವರು ನಡೆದು ಬರುವ ದೃಶ್ಯ ಆಕರ್ಷಕ ಅಂತ ಬೇರೆ ಹೇಳಬೇಕಿಲ್ಲ. ಅಗಲೇ ಹೇಳಿದ ಹಾಗೆ, ಜನ ಅವರನ್ನು ನೋಡಿದಾಕ್ಷಣ ಅಕ್ಕಾ ಅಕ್ಕಾ ಅಂತ ದುಂಬಾಲು ಬೀಳುತ್ತಾರೆ. ದೇವಿಯ ದರ್ಶನಕ್ಕಾಗಿ ಸಾಲಲ್ಲಿ ನಿಂತಿರುವ ಜನ ಸಹ ಭವಾನಿ ಅವರಿಗೆ ಕೈಮುಗಿದು ನಮಸ್ಕರಿಸುವುದನ್ನು ನೋಡಬಹುದು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿ ಸ್ವರೂಪ್ ಗೆಲುವಿಗೆ ಭವಾನಿ ನಡೆಸಿದ ಪ್ರಚಾರ ನಿರ್ಣಾಯಕವಾಗಿತ್ತು ಅಂತ ಕನ್ನಡಿಗರಿಗೆಲ್ಲ ಗೊತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ