ಟಿಕೆಟ್ ಘೋಷಣೆಯಾಗದೆ ಮಗ ಪಜ್ವಲ್ ಪರ ಹಾಸನದಲ್ಲಿ ಪ್ರಚಾರ ಶುರುಮಾಡಿದ ಭವಾನಿ ರೇವಣ್ಣ

Updated on: Mar 11, 2024 | 11:49 AM

ಈಗ ಲೋಕಸಭಾ ಚುನಾವಣೆ ಎದುರಾಗಿದೆ ಮತ್ತು ಚುನಾವಣೆಗಾಗೇ ಜೆಡಿಎಸ್ ಮತ್ತು ಬಿಜೆಪಿ ಒಂದಾಗಿವೆ. ಹಾಸನ ಲೋಕಸಭಾ ಕ್ಷೇತ್ರದಿಂದ ತಮ್ಮ ಮಗ ಮತ್ತು ಹಾಲಿ ಸಂಸದ ಪ್ರಜ್ವಲ್ ರೇವಣ್ಣಗೆ ಟಿಕೆಟ್ ಸಿಗೋದು ಖಾತ್ರಿಯಾದಂತಿದೆ. ಹಾಗಾಗೇ, ಭವಾನಿ ಅವರು ಮಗನ ಪರವಾಗಿ ಪ್ರಚಾರ ಶುರುಮಾಡಿಬಿಟ್ಟಿದ್ದಾರೆ.

ಹಾಸನ: ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದವರು ಜೆಡಿಎಸ್ ನಾಯಕಿ ಮತ್ತು ಹೆಚ್ ಡಿ ದೇವೇಗೌಡರ (HD Devegowda) ಹಿರಿಸೊಸೆ ಭವಾನಿ ರೇವಣ್ಣ (Bhavani Revanna) ಹಾಸಕ ಕ್ಷೇತ್ರದಲ್ಲಿ ತಾರಾ ವರ್ಚಸ್ಸಿದೆ, ಅವರಲ್ಲಿ ಮತದಾರರನ್ನು ಸೆಳೆಯುವ ಶಕ್ತಿಯಿದೆ. ಅವರ ನಾಮಬಲ ಮತ್ತು ಪ್ರಚಾರದಿಂದಾಗೇ ಕಳೆದ ವಿಧಾನ ಸಭಾ ಕ್ಷೇತ್ರದಲ್ಲಿ ಹಾಸನ ಕ್ಷೇತ್ರದಿಂದ ಸ್ವರೂಪ್ ಪ್ರಕಾಶ್ (Swaroop Prakash) ಗೆದ್ದರೆನ್ನುವುದು ಸುಳ್ಳಲ್ಲ. ಈಗ ಲೋಕಸಭಾ ಚುನಾವಣೆ ಎದುರಾಗಿದೆ ಮತ್ತು ಚುನಾವಣೆಗಾಗೇ ಜೆಡಿಎಸ್ ಮತ್ತು ಬಿಜೆಪಿ ಒಂದಾಗಿವೆ. ಹಾಸನ ಲೋಕಸಭಾ ಕ್ಷೇತ್ರದಿಂದ ತಮ್ಮ ಮಗ ಮತ್ತು ಹಾಲಿ ಸಂಸದ ಪ್ರಜ್ವಲ್ ರೇವಣ್ಣಗೆ ಟಿಕೆಟ್ ಸಿಗೋದು ಖಾತ್ರಿಯಾದಂತಿದೆ. ಹಾಗಾಗೇ, ಭವಾನಿ ಅವರು ಮಗನ ಪರವಾಗಿ ಪ್ರಚಾರ ಶುರುಮಾಡಿಬಿಟ್ಟಿದ್ದಾರೆ. ಇಲ್ಲಿನ ಸ್ಟಿಲ್ ಚಿತ್ರಗಳಲ್ಲಿ ಅವರು ಮಾಜಿ ಸಚಿವ ಮತ್ತು ಹಾಲಿ ಶಾಸಕ ಎ ಮಂಜು ಅವರ ಮನೆಗೆ ಭೇಟಿ ನೀಡಿರುವುದನ್ನು ಗಮನಿಸಬಹುದು. ಅರಕಲಗೂಡಿನಲ್ಲಿರುವ ಶಾಸಕ ಮನೆಗೆ ಭವಾನಿ ಮತ್ತು ಪ್ರಜ್ವಲ್ ಭೇಟಿ ನೀಡಿ, ಗೆಲುವಿಗಾಗಿ ಶ್ರಮಿಸಬೇಕೆಂದು ವಿನಂತಿಸಿಕೊಂಡಿದ್ದಾರೆ. ಜಿಲ್ಲೆಯ ಬೇರೆ ಶಾಸಕರ ಮನೆಗೂ ಭವಾನಿ ಭೇಟಿ ನೀಡಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಹಾಸನಾಂಬೆಯ ದರ್ಶನಕ್ಕೆ ಪತಿಯೊಂದಿಗೆ ಆಗಮಿಸಿದ ಭವಾನಿ ರೇವಣ್ಣ ಜನರ ಗಮನ ತಮ್ಮತ್ತ ಸೆಳೆದುಕೊಂಡರು!

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More