Vijayapura: ಭೀಮಾ ನದಿ ಆರ್ಭಟ; ಪ್ರವಾಹಕ್ಕೆ ಊರಿಗೆ ಊರೇ ಖಾಲಿ

Edited By:

Updated on: Sep 27, 2025 | 11:44 AM

ಭೀಮಾನದಿ ಪ್ರವಾಹದಿಂದಾಗಿ ಆಲಮೇಲ ತಾಲೂಕಿನ ಕುಮಸಗಿ ಗ್ರಾಮದ 30ಕ್ಕೂ ಅಧಿಕ ಮನೆಗಳು ಸಂಪೂರ್ಣ ಜಲಾವೃತವಾಗಿವೆ. ಭೀಮಾ ತಟದ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬೆಳೆಯೂ ಪ್ರವಾಹಕ್ಕೆ ಆಹುತಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ. ಪ್ರವಾಹ ಸಂತ್ರಸ್ತರಿಗೆ ಗಂಜಿ ಕೇಂದ್ರಗಳನ್ನ ತೆರೆದು ಆಶ್ರಯ, ಊಟೋಪಚಾರ ವ್ಯವಸ್ಥೆ ಕಲ್ಪಿಸಲಾಗಿದೆ.

ವಿಜಯಪುರ, ಸೆಪ್ಟೆಂಬರ್​ 27: ಜಿಲ್ಲೆಯಲ್ಲಿ ಭೀಮಾನದಿ ಉಕ್ಕಿ ಹರಿಯುತ್ತಿರುವ ಕಾರಣ, ಇಂಡಿಯ ಆಲಮೇಲ ತಾಲೂಕಿನಲ್ಲಿ ಪ್ರವಾಹ (Flood) ಉಂಟಾಗಿದೆ. ಕುಮಸಗಿ ಗ್ರಾಮದ 30ಕ್ಕೂ ಅಧಿಕ ಮನೆಗಳು ಸಂಪೂರ್ಣ ಜಲಾವೃತವಾಗಿದ್ದು, ಮನೆಗಳಲ್ಲಿದ್ದ ಬೆಲೆಬಾಳುವ ವಸ್ತುಗಳು ಪಡಿತರ ಸಾಮಗ್ರಿಗಳು ನೀರಲ್ಲಿ ಕೊಚ್ಚಿ ಹೋಗಿವೆ. ಜನ ಮನೆಗಳನ್ನ ಬಿಟ್ಟು ಗಂಜಿ ಕೇಂದ್ರಗಳಿಗೆ ಶಿಫ್ಟ್​ ಆಗಿದ್ದು, ಭೀಮಾ ತಟದ ನೂರಾರು ಎಕರೆ ಪ್ರದೇಶದ ಬೆಳೆ ಪ್ರವಾಹಕ್ಕೆ ಆಹುತಿಯಾಗಿದೆ. ಪ್ರತಿ ಎಕರೆಗೆ 25,000 ರೂಪಾಯಿ ಪರಿಹಾರ ಶೀಘ್ರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Published on: Sep 27, 2025 11:43 AM
Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More