ಬಂಡೀಪುರ ಅರಣ್ಯದಲ್ಲಿ ಭೀಮನ ದರ್ಬಾರ್​: ಹುಕುಂ ಟೈಗರ್​ ಕಾ ಹುಕುಂ

Edited By:

Updated on: Feb 02, 2025 | 10:21 AM

ಬಂಡೀಪುರ ಹುಲಿ ಸಂರಕ್ಷಿತಾರಣ್ಯ ವಿಶ್ವದಲ್ಲೇ ಪ್ರಸಿದ್ಧಿ ಪಡೆದಿದೆ. ಈ ಸಂರಕ್ಷಿತಾರಣ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಸಫಾರಿ ನಡೆಸಿದ್ದರು. ಇಂತಹ ಪ್ರವಾಸಿಗರ ಹಾಟ್ ಫೇವರೆಟ್ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಭೀಮನ ದರ್ಬಾರ್ ಶುರುವಾಗಿದೆ. ಯಾರೂ ಈ ಭೀಮ ಈತನಿಗೆ ಪ್ರವಾಸಿಗರು ಯಾಕೆ ಫಿದಾ ಆಗಿದ್ದಾರೆ.

ಚಾಮರಾಜನಗರ, ಫೆಬ್ರವರಿ 02: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಂದರೆ ವನ್ಯಪ್ರೇಮಿಗಳಿಗೆ ನೆನಪಾಗುವುದು ಪ್ರಿನ್ಸ್ ಹೆಸರಿನ ಹುಲಿ. ಪ್ರಿನ್ಸ್ ಹುಲಿ ಪ್ರವಾಸಿಗರನ್ನು ಕಂಡರೇ ದೂರ ಓಡದೆ ಹತ್ತಿರಕ್ಕೆ ಬರುತ್ತಿತ್ತು. ಸಫಾರಿಗೆ ಹೋದ ಪ್ರವಾಸಿಗರಿಗೆ ಗಂಟೆಗಟ್ಟಲೆ ದರ್ಶನ ಕೊಡುತ್ತಿತ್ತು. ಸಫಾರಿ ಜೀಪ್ ಹತ್ತಿರವೇ ಸುಳಿದಾಡುತ್ತಿತ್ತು. ಈಗ ಪ್ರಿನ್ಸ್​ನಂತೆ ಭೀಮ ಎಂಬ ಹುಲಿಯು ಪ್ರವಾಸಿಗರನ್ನು ಸೆಳೆಯುತ್ತಿದೆ. ಪ್ರಿನ್ಸ್ ಬಳಿಕ ಅನೇಕ ಹುಲಿಗಳು ಬಂಡೀಪುರ ಸಫಾರಿ ಏರಿಯಾದಲ್ಲಿ ಕಂಡಬಂದರೂ ಕೂಡ ಹುಲಿ ದರ್ಶನ ಸಂಪೂರ್ಣ ಕಡಿಮೆಯಾಗಿತ್ತು. ಆದರೆ, ಪ್ರಿನ್ಸ್ ಹುಲಿಯ ಸ್ಥಾನ ತುಂಬುತ್ತಿರುವುದೇ ಈ ಭೀಮ.

Published on: Feb 02, 2025 10:20 AM
Follow Us
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More