ಭೀಮಾ ನದಿ ತೀರದಲ್ಲಿ ಮತ್ತೆ ರಕ್ತಚರಿತ್ರೆ: 6 ಜನರ ಭೀಕರ ಕೊಲೆ ಮಾಡಿದ ಸ್ಥಳ ಹೇಗಿದೆ ನೋಡಿ
ವಿಜಯಪುರ ಜಿಲ್ಲೆಯ ಚಡಚನ ತಾಲೂಕಿನ ಗೋವಿಂದಪುರ ಬಳಿ ಭೀಮಾ ನದಿ ತಟದಲ್ಲಿ 24 ಎಕರೆ ಜಮೀನಿಗೆ ಸಂಬಂಧಿಸಿದ ವ್ಯಾಜ್ಯದಲ್ಲಿ ನಿರಾಳೆ ಕುಟುಂಬದ ಐವರು ಸೇರಿದಂತೆ ಆರು ಮಂದಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಳೆಯ ಪ್ರೇಮ ಪ್ರಕರಣದಿಂದ ಆರಂಭವಾದ ದ್ವೇಷ ಇದೀಗ ಜಮೀನು ವ್ಯಾಜ್ಯಕ್ಕೆ ತಿರುಗಿ, ಸಂಬಂಧವಿಲ್ಲದ ಕುಟುಂಬಕ್ಕೆ ದುರಂತ ತಂದಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ವಿಜಯಪುರ, ಮೇ,30: ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದ ಬಳಿಯ ಭೀಮಾ ನದಿ ತಟದಲ್ಲಿ ನೆನ್ನೆ (ಮೇ.29) ಭೀಕರ ಕೊಲೆ ನಡೆದಿದೆ. ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಐವರು ಹಾಗೂ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರು ದಾರುಣವಾಗಿ ಹತ್ಯೆ ಮಾಡಲಾಗಿದೆ. ನಿರಾಳೆ ಕುಟುಂಬದ ದುಂಡಪ್ಪ ಶಿವಪುತ್ರ, ಚಂದ್ರಕಾಂತ್, ರಾಹುಲ್, ಸಮರ್ಥ್ ಹಾಗೂ ಅವರ ಜೊತೆಗಿದ್ದ ಶಬ್ಬೀರ್ ಅತ್ತಾರ್ ಎಂಬುವರು ಈ ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಈ ಹತ್ಯೆ ನಡೆದ ಸ್ಥಳ ಹೇಗಿದೆ ಎಂಬುದನ್ನು ಟಿವಿ9 ಪ್ರತ್ಯಕ್ಷ ವರದಿ ಮಾಡಿದೆ. ಘಟನೆ ನಡೆದ ಜಮೀನನ್ನು ನಿರಾಳೆ ಕುಟುಂಬದವರು ಇತ್ತೀಚೆಗೆ ಖರೀದಿಸಿದ್ದರು. 15ರಿಂದ 20 ಮಂದಿ ಯುವಕರ ತಂಡ ಬೈಕ್ಗಳಲ್ಲಿ ಬಂದು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು ಹಾರಿಸಿ ಹತ್ಯೆ ನಡೆಸಿದೆ. ಈ ಘಟನೆಯಿಂದ ವಿಜಯಪುರ ಜಿಲ್ಲೆಯ ಜನತೆ ತಲ್ಲಣಗೊಂಡಿದ್ದಾರೆ. ಚಡಚನ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದಾರೆ. ಈ ಕುರಿತು ತನಿಖೆ ಮುಂದುವರಿದಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
