ನ.2ರಂದು ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಭೀಮ್ ಆರ್ಮಿ ಬೆಂಬಲ, ಕಂಡಿಷನ್ಸ್​​ ಅಪ್ಲೈ

Updated on: Oct 28, 2025 | 8:39 PM

ಡಿಸಿ ಫೌಜಿಯಾ, SP ಅಡ್ಡೂರು ಶ್ರೀನಿವಾಸಲು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆರ್​ಎಸ್​ಎಸ್​ ಹಾಗೂ ಭೀಮ್ ಆರ್ಮಿ ನಡುವೆ ವಾಗ್ವಾದ ನಡೆದಿದ್ದರಿಂದ ಒಮ್ಮತ ಮೂಡದೇ ಗೊಂದಲ, ಗದ್ದಲದಲ್ಲೇ ಅಂತ್ಯವಾಗಿದೆ. ಆರ್​​ಎಸ್​​ಎಸ್​ ಹಾಗೂ ಭೀಮ್ ಆರ್ಮಿ ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಇನ್ನು ಆರ್​ಎಸ್​ಎಸ್ ಭಗವಾ ಧ್ವಜ ಬಿಟ್ಟು​​ ನವೆಂಬರ್ 2ರಂದು ಚಿತ್ತಾಪುರದಲ್ಲಿ ಪಥಸಂಚಲನದಲ್ಲಿ ಸಂವಿಧಾನದ ಪೀಠಿಕೆ ಹಾಗೂ ಭಾರತದ ತ್ರಿವರ್ಣ ಧ್ವಜ ಹಿಡಿದ್ರೆ ಮಾತ್ರ ಬೆಂಬಲ ಕೊಡುತ್ತೇವೆ. ಇಲ್ಲ ಅಂದರೆ ಇಲ್ಲ ಎಂದು ಭೀಮ್ ಆರ್ಮಿ ನಾಯಕರು ಕಡ್ಡಿ ಮುಂರಿದಂತೆ ಹೇಳಿದ್ದಾರೆ.

ಕಲಬುರಗಿ, (ಅಕ್ಟೋಬರ್ 28): ಚಿತ್ತಾಪುರದಲ್ಲಿ RSS ಪಥಸಂಚಲನದ ವಿಚಾರವಾಗಿ ಹೈಕೋರ್ಟ್​ ಸೂಚನೆ ಮೇರೆಗೆ ಇಂದು (ಅಕ್ಟೋಬರ್ 28) ಕಲಬುರಗಿಯಲ್ಲಿ 10 ಸಂಘಟನೆಗಳ ಜತೆ ಶಾಂತಿ ಸಭೆ ನಡೆದಿದ್ದು, ಈ ವೇಳೆ ಭಾರೀ ಹೈಡ್ರಾಮಾವೇ ನಡೆದಿದೆ. ಡಿಸಿ ಫೌಜಿಯಾ, SP ಅಡ್ಡೂರು ಶ್ರೀನಿವಾಸಲು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆರ್​ಎಸ್​ಎಸ್​ ಹಾಗೂ ಭೀಮ್ ಆರ್ಮಿ ನಡುವೆ ವಾಗ್ವಾದ ನಡೆದಿದ್ದರಿಂದ ಒಮ್ಮತ ಮೂಡದೇ ಗೊಂದಲ, ಗದ್ದಲದಲ್ಲೇ ಅಂತ್ಯವಾಗಿದೆ. ಆರ್​​ಎಸ್​​ಎಸ್​ ಹಾಗೂ ಭೀಮ್ ಆರ್ಮಿ ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಇನ್ನು ಆರ್​ಎಸ್​ಎಸ್ ಭಗವಾ ಧ್ವಜ ಬಿಟ್ಟು​​ ನವೆಂಬರ್ 2ರಂದು ಚಿತ್ತಾಪುರದಲ್ಲಿ ಪಥಸಂಚಲನದಲ್ಲಿ ಸಂವಿಧಾನದ ಪೀಠಿಕೆ ಹಾಗೂ ಭಾರತದ ತ್ರಿವರ್ಣ ಧ್ವಜ ಹಿಡಿದ್ರೆ ಮಾತ್ರ ಬೆಂಬಲ ಕೊಡುತ್ತೇವೆ. ಇಲ್ಲ ಅಂದರೆ ಇಲ್ಲ ಎಂದು ಭೀಮ್ ಆರ್ಮಿ ನಾಯಕರು ಕಡ್ಡಿ ಮುಂರಿದಂತೆ ಹೇಳಿದ್ದಾರೆ.

Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More