ಚಿಂಚೋಳಿ ತಾಲೂಕಿನಲ್ಲಿ ಭಾರಿ ಮಳೆ, ಭೂತ್ಪೂರ ಸೇತುವೆ ಮುಳುಗಡೆ; ಕಲಬುರಗಿ, ಸೇಡಂಗೆ ಸಂಪರ್ಕ ಕಟ್

ಅರುಣ್​ ಕುಮಾರ್​ ಬೆಳ್ಳಿ

Updated on: Jul 22, 2025 | 12:04 PM

ಈಗಾಗಲೇ ವರದಿಯಾಗಿರುವಂತೆ ಚಿಂಚೋಳಿ ಸೇರಿದಂತೆ ಕಲಬುರಗಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದೆ, ಅನೇಕ ಕಡೆಗಳಲ್ಲಿ ಹಳ್ಳಕೊಳ್ಳಗಳೆಲ್ಲ ತುಂಬಿ ಹರಿಯುತ್ತಿವೆ ಮತ್ತು ಕೆಲವು ಭಾಗಗಳಲ್ಲಿ ಸೇತುವೆ ಮತ್ತು ರಸ್ತೆಗಳ ಮೇಲೆ ನೀರು ಹರಿಯುತ್ತಿದೆ. ಚಿಂಚೋಳಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಸೇಡಂ ರಸ್ತೆಯಲ್ಲಿರುವ ತೋಂಟದಾರ್ಯ ಸಿದ್ದೇಶ್ವರ ಮಠದ ಆವರಣಕ್ಕೂ ನೀರು ನುಗ್ಗಿದೆ.

ಕಲಬುರಗಿ, ಜುಲೈ 22: ಜಿಲ್ಲೆಯ ಚಿಂಚೋಳಿ ತಾಲೂಕಿನ ಭೂತ್ಪೂರ ಗ್ರಾಮಕ್ಕೆ (Bhutpur village) ಹೋಗುವ ರಸ್ತೆಯಿದು. ರಸ್ತೆ ಎಲ್ಲಿ ಅಂತ ಕೇಳಬೇಡಿ. ಅಸಲಿಗೆ ಇಲ್ಲೊಂದು ಸೇತುವೆ ಇದ್ದು ಅದು ಸಂಪೂರ್ಣವಾಗಿ ಮುಳುಗಿಹೋಗಿ ರಸ್ತೆಯ ಮೇಲೆ ರಭಸದಿಂದ ನೀರು ಹರಿಯುತ್ತಿದೆ. ಭೂತ್ಪೂರ ಗ್ರಾಮದ ನಿವಾಸಿಗಳಿಗೆ ಸೇಡಂ, ಕಾಳಗಿ ಮತ್ತು ಚಿಂಚೋಳಿಗೆ ಹೋಗುವ ರಸ್ತೆ ಇದೇ ಆಗಿರವುದರಿಂದ ಸಂಪರ್ಕ ಕಟ್ ಆಗಿದೆ. ದ್ವಿಚಕ್ರವಾಹನಗಳಲ್ಲಿ ತೆರಳುವವರು ಸೇತುವೆ ಮೇಲೆ ನೀರು ಭೋರ್ಗರೆಯುತ್ತಿರುವುದನ್ನು ನೋಡಿ ವಿಧಿಯಿಲ್ಲದೆ ವಾಪಸ್ಸು ಹೋಗುತ್ತಿದ್ದಾರೆ. ಮತ್ತೇ ಮಳೆಯಾಗುವ ಮುನ್ಸೂಚನೆ ಇರೋದ್ರಿಂದ ಜನರು ನಿರಾಳರಾಗುವ ಸನ್ನಿವೇಶವೇನೂ ಇಲ್ಲ.

ಇದನ್ನೂ ಓದಿ:    ಟಿಬಿ ಡ್ಯಾಂನಿಂದ ತುಂಗಭದ್ರಾ ನದಿಗೆ 80,000 ಕ್ಯೂಸೆಕ್ಸ್ ನೀರು ಹೊರಹರಿವು, ಮುಳುಗಡೆ ಭೀತಿಯಲ್ಲಿ ಕಂಪ್ಲಿ ಸೇತುವೆ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.