ಶಿಷ್ಟಾಚಾರ ಉಲ್ಲಂಘನೆ ಆರೋಪ: ಬೀದರ್ ಡಿಹೆಚ್ಒ, ಟಿಹೆಚ್ಒ ಅಮಾನತು ಮಾಡಿ ಆರೋಗ್ಯ ಇಲಾಖೆ ಆಯುಕ್ತರಿಂದ ಆದೇಶ
ಶಿಷ್ಟಾಚಾರ ಉಲ್ಲಂಘನೆ ಆರೋಪದ ಮೇಲೆ ಬೀದರ್ ಡಿಹೆಚ್ಓ ಡಾ. ಧ್ಯಾನೇಶ್ವರ ನಿರಗುಡಿ ಹಾಗೂ ಬಸವಕಲ್ಯಾಣ ಟಿಹೆಚ್ಓ ಡಾ. ಅಶೋಕ್ ಮೈಲಾರಿ ಅವರನ್ನು ಅಮಾನತು ಮಾಡಲಾಗಿದೆ. ಉಪವಿಭಾಗ ಆಸ್ಪತ್ರೆ ಕಟ್ಟಡ ಕಾಮಗಾರಿ ಬ್ಯಾನರ್ನಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಭಾವಚಿತ್ರ ಹಾಕದೇ ಇದ್ದದ್ದು ಹಾಗೂ ಸೌಲಭ್ಯ ಒದಗಿಸುವಲ್ಲಿ ವಿಫಲರಾದದ್ದು ಅಮಾನತಿಗೆ ಕಾರಣವಾಗಿದೆ. ಆರೋಗ್ಯ ಇಲಾಖೆ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ.
ಬೀದರ್, ಸೆಪ್ಟೆಂಬರ್ 18: ಜಿಲ್ಲಾ ಆರೋಗ್ಯಾಧಿಕಾರಿ ಡಾ. ಧ್ಯಾನೇಶ್ವರ ನಿರಗುಡಿ ಮತ್ತು ಬಸವಕಲ್ಯಾಣ ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ಮೈಲಾರಿ ಅವರನ್ನು ತತ್ಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಶಿಷ್ಟಾಚಾರ ಉಲ್ಲಂಘನೆ ಮತ್ತು ಕರ್ತವ್ಯ ಲೋಪದ ಆರೋಪ ಹಿನ್ನೆಲೆ ಆರೋಗ್ಯ ಇಲಾಖೆ ಆಯುಕ್ತ ಗುರುದತ್ತ ಹೆಗಡೆ ಅವರು ಈ ಅಮಾನತು ಆದೇಶವನ್ನು ಹೊರಡಿಸಿದ್ದಾರೆ. ಉಪವಿಭಾಗ ಆಸ್ಪತ್ರೆ ಕಟ್ಟಡ ಕಾಮಗಾರಿಯ ಸಂದರ್ಭದಲ್ಲಿ ನಡೆದ ಘಟನೆಯೇ ಅಮಾನತಿಗೆ ಮುಖ್ಯ ಕಾರಣವಾಗಿದೆ. ಕಾಮಗಾರಿ ಸ್ಥಳದಲ್ಲಿ ಹಾಕಲಾಗಿದ್ದ ಬ್ಯಾನರ್ನಲ್ಲಿ ರಾಜ್ಯದ ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಭಾವಚಿತ್ರವನ್ನು ಹಾಕದೇ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದರ ಜೊತೆಗೆ, ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಲ್ಲಿಯೂ ಈ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ದೂರಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

