AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವನ್ಯ ಪ್ರಾಣಿಗಳಿಂದ ಬೆಳೆ ರಕ್ಷಣೆಗೆ ‘ಸೀರೆ’ ಐಡಿಯಾ! ಬೀದರ್ ರೈತರ ವಿನೂತನ ಯತ್ನಕ್ಕೆ ಸಿಕ್ಕಿದೆ ಯಶಸ್ಸು

ವನ್ಯ ಪ್ರಾಣಿಗಳಿಂದ ಬೆಳೆ ರಕ್ಷಣೆಗೆ ‘ಸೀರೆ’ ಐಡಿಯಾ! ಬೀದರ್ ರೈತರ ವಿನೂತನ ಯತ್ನಕ್ಕೆ ಸಿಕ್ಕಿದೆ ಯಶಸ್ಸು

ಸುರೇಶ ನಾಯಕ
| Edited By: |

Updated on: Dec 08, 2025 | 10:14 AM

Share

ಬೀದರ್ ರೈತರು ವನ್ಯಜೀವಿಗಳಿಂದ ಬೆಳೆ ರಕ್ಷಿಸಲು ವಿಭಿನ್ನ ಐಡಿಯಾ ಕಂಡುಕೊಂಡಿದ್ದಾರೆ. ರಾತ್ರಿ ವೇಳೆ ಜಿಂಕೆ, ಮೊಲ, ಕಾಡುಹಂದಿಗಳು ಬೆಳೆ ನಾಶಪಡಿಸುವುದನ್ನು ತಡೆಯಲು, ಹೊಲದ ಅಂಚಿನಲ್ಲಿ ಹಳೆಯ ಸೀರೆಗಳನ್ನು ಕಟ್ಟುತ್ತಿದ್ದಾರೆ. ಗಾಳಿಗೆ ಹಾರಾಡುವ ಈ ಸೀರೆಗಳು ಪ್ರಾಣಿಗಳನ್ನು ಹೆದರಿಸಿ ಬೆಳೆ ರಕ್ಷಿಸುತ್ತಿವೆ. ಇದು ಕಡಿಮೆ ವೆಚ್ಚದ ಪರಿಣಾಮಕಾರಿ ವಿಧಾನವಾಗಿದೆ.

ಬೀದರ್, ಡಿಸೆಂಬರ್ 8: ಕಾಡು ಪ್ರಾಣಿಗಳ ಉಪಟಳದಿಂದ ಬೆಳೆಗಳನ್ನು ರಕ್ಷಿಸಲು ಬೀದರ್ ರೈತರು ವಿನೂತನ ವಿಧಾನವೊಂದನ್ನು ಅಳವಡಿಸಿಕೊಂಡಿದ್ದಾರೆ. ಹಳೆಯ ಸೀರೆಗಳನ್ನು ಬಳಸಿ ಜಿಂಕೆ, ಮೊಲ ಮತ್ತು ಕಾಡುಹಂದಿಗಳಿಂದ ಬೆಳೆಗಳನ್ನು ಕಾಪಾಡಿಕೊಳ್ಳುತ್ತಿದ್ದಾರೆ. ಚಳಿಗಾಲದಲ್ಲಿ ರಾತ್ರಿ ಹೊತ್ತು ಹೊಲಗಳಿಗೆ ನುಗ್ಗಿ ಕಡಲೆ, ಕುಸುಬಿ, ಜೊಳದಂತಹ ಬೆಳೆಗಳನ್ನು ಹಾಳು ಮಾಡುತ್ತಿದ್ದ ಪ್ರಾಣಿಗಳಿಂದ ರೈತರು ಸಾಕಷ್ಟು ನಷ್ಟ ಅನುಭವಿಸುತ್ತಿದ್ದರು. ಇದನ್ನು ತಪ್ಪಿಸಲು, ಸೀರೆಗಳನ್ನು ಹೊಲದ ಅಂಚು ಮತ್ತು ಬೆಳೆಗಳ ಸುತ್ತಲೂ ಕಟ್ಟುತ್ತಾರೆ. ಇದರಿಂದ ಪ್ರಾಣಿಗಳು ಹೊಲದ ಹತ್ತಿರ ಬರುವುದಿಲ್ಲ. ಗಾಳಿಗೆ ಸೀರೆಗಳು ಹಾರಾಡುವುದರಿಂದ ಮತ್ತು ಗೋಡೆಗಳಂತೆ ಕಾಣುವುದರಿಂದ ಕಾಡು ಪ್ರಾಣಿಗಳು ಹೆದರಿ ದೂರ ಉಳಿಯುತ್ತವೆ. ಈ ಹಿಂದೆ ರೈತರು ಬೆದರು ಬೊಂಬೆಗಳನ್ನು ಬಳಸುತ್ತಿದ್ದರೂ, ಅವು ಪ್ರಾಣಿಗಳಿಗೆ ಅಷ್ಟೊಂದು ಪರಿಣಾಮಕಾರಿಯಾಗಿರಲಿಲ್ಲ. ಸುಮಾರು 100 ರೂಪಾಯಿಗಳಲ್ಲಿ ದೊರೆಯುವ ಸೀರೆಗಳು ರೈತರಿಗೆ ಕಡಿಮೆ ವೆಚ್ಚದಲ್ಲಿ ಪರಿಹಾರ ನೀಡಿವೆ. ಇದರಿಂದ ರೈತರಿಗೆ ರಾತ್ರಿ ಹೊತ್ತು ಪ್ರಾಣಿಗಳನ್ನು ಕಾಯುವ ಶ್ರಮವೂ ತಪ್ಪಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More