ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?

Edited By:

Updated on: Jan 02, 2026 | 5:01 PM

ಬೀದರ್ ತಾಲ್ಲೂಕಿನ ರಂಜೋಳಖೇಣಿ ಸರ್ಕಾರಿ ಶಾಲೆಯ ಮಕ್ಕಳಿಗೆ ಹೊಸ ವರ್ಷದ ಅಂಗವಾಗಿ ಶಿಕ್ಷಕರು ವಿಶೇಷ ಬಜ್ಜಿ ಕಟಕ್ ರೊಟ್ಟಿ ಊಟದ ವ್ಯವಸ್ಥೆ ಮಾಡಿದರು. ಬೀದರ್‌ನ ಈ ಸಾಂಪ್ರದಾಯಿಕ ಊಟವನ್ನು ಸವಿದು ಮಕ್ಕಳು ಅತೀವ ಸಂತಸಗೊಂಡರು. ವಿವಿಧ ಬಗೆಯ ತರಕಾರಿಗಳಿಂದ ತಯಾರಿಸಿದ ಬಜ್ಜಿ ಮತ್ತು ಕಟಕ್ ರೊಟ್ಟಿ ಮಕ್ಕಳ ಪಾಲಿಗೆ ಹೊಸ ವರ್ಷದ ಸಿಹಿ ಉಡುಗೊರೆಯಾಯಿತು.

ಬೀದರ್​, ಜನವರಿ 02: ಹೊಸ ವರ್ಷ ಹಿನ್ನೆಲೆ ಬೀದರ್ ತಾಲ್ಲೂಕಿನ ರಂಜೋಳಖೇಣಿ ಗ್ರಾಮದ ಸರ್ಕಾರ ಶಾಲಾ ಮಕ್ಕಳು ವಿಶೇಷ ಬಜ್ಜಿ ಮತ್ತು ಕಟಕ್ ರೊಟ್ಟಿ ಊಟ ಸವಿದರು. ಮುಖ್ಯೋಪಾಧ್ಯಾಯ ಮಂಜುನಾಥ್​,​ ಶಿಕ್ಷಕರಾದ ಚಂದ್ರಕಾಂತ್ ಹಿಂದೊಡ್ಡಿ, ವಿಷ್ಣು ಕಾಂತ್ ಠಾಕೂರ್​​ ಮಕ್ಕಳಿಗೆ ಊಟದ ವ್ಯವಸ್ಥೆ ಮಾಡಿದ್ದರು. ಕಾರಹುಣ್ಣಿಮೆ‌ಯ ದಿನ ರೈತರು ಹೊಲಕ್ಕೆ ಹೋಗಿ ಭೂತಾಯಿಗೆ ಪೂಜೆ ಮಾಡಿ ಬಜ್ಜಿ ಊಟ ಸವಿಯುವುದು ಇಲ್ಲಿನ‌ ವಾಡಿಕೆ. ಹೀಗಾಗಿ ಈ ಹೊಸ ವರ್ಷದಂದು ಹೊಸತನದಿಂದ ಕೂಡಿರಲೆಂದು ಬಜ್ಜಿ ಊಟದ ವ್ಯವಸ್ಥೆ ಮಾಡಲಾಗಿದೆ. ಅವರೆಕಾಯಿ, ಕಡಲೆ, ತೊಗರೆ, ಶೇಂಗಾ ಹೀಗೆ ವಿವಿಧ ಬಗೆಯ ತರಕಾರಿ ಸೇರಿಸಿ ಬಜ್ಜಿ ತಯಾರಿಸಲಾಗಿದ್ದು, ಮಕ್ಕಳು ಚಪ್ಪರಿಸಿ ತಿಂದರು. ಶಿಕ್ಷಕರ ಈ ಕಾರ್ಯಕ್ಕೆ‌ ಮಕ್ಕಳು ‌ಫುಲ್ ಖುಷಿ ಪಟ್ಟರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More