AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್ ಸ್ಮಶಾನದಲ್ಲಿ ನಿರ್ಮಿಸಿರುವ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಚಿಕಿತ್ಸೆ, ವರ್ಷದಿಂದ ಈ ದುಃಸ್ಥಿತಿ!

ಬೀದರ್ ಸ್ಮಶಾನದಲ್ಲಿ ನಿರ್ಮಿಸಿರುವ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಚಿಕಿತ್ಸೆ, ವರ್ಷದಿಂದ ಈ ದುಃಸ್ಥಿತಿ!

ಸುರೇಶ ನಾಯಕ
| Edited By: |

Updated on: Jan 05, 2024 | 10:30 AM

Share

ಸ್ಮಶಾನ ಇದೆ ಎಂಬ ಕಾರಣಕ್ಕೆ ಗರ್ಭಿಣಿಯರು ಇಲ್ಲಿಗೆ ಹೆರಿಗೆಗೆ ಬರುತ್ತಿಲ್ಲ. ಹೊರರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿದೆ. ಕೆಮ್ಮು ನೆಗಡಿ ಜ್ವರದಿಂದ ಬಳಲುವ ರೋಗಿಗಳಿಗೆ ಮಾತ್ರ ಇಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಮಶಾನದಲ್ಲಿನ ಆಸ್ಪತ್ರೆಯಲ್ಲಿ ಮಗು ಜನಿಸಿದರೆ ಕೇಡಾಗುತ್ತೆ ಅನ್ನೋ ಕಾರಣಕ್ಕೆ ಗರ್ಭಿಣಿಯರು ಚಿಕಿತ್ಸೆಗೆ ಇಲ್ಲಿಗೆ ಬರುತ್ತಿಲ್ಲ.

ಬೀದರ್: ಸ್ಮಶಾನದಲ್ಲಿಯೇ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ನಿರ್ಮಾಣ ಮಾಡಲಾಗಿದೆ. ಮತ್ತು ಒಂದು ವರ್ಷದಿಂದ ಆ ಸ್ಮಶಾನ ಜಾಗದಲ್ಲಿರುವ ಆರೋಗ್ಯ ಕೇಂದ್ರಲ್ಲಿಯೇ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಗರ್ಭಿಣಿಯರು ಹೆರಿಗೆಗೆ ಬರುತ್ತಿಲ್ಲ. ಬೀದರ್ ತಾಲೂಕಿನ ಬಗದಲ್ ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ದುಃಸ್ಥಿತಿ ನಿರ್ಮಾಣವಾಗಿದೆ.

ಸ್ಮಶಾನ ಇದೆ ಎಂಬ ಕಾರಣಕ್ಕೆ ಗರ್ಭಿಣಿಯರು ಇಲ್ಲಿಗೆ ಹೆರಿಗೆಗೆ ಬರುತ್ತಿಲ್ಲ. ಹೊರರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿದೆ. ಕೆಮ್ಮು ನೆಗಡಿ ಜ್ವರದಿಂದ ಬಳಲುವ ರೋಗಿಗಳಿಗೆ ಮಾತ್ರ ಇಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಮಶಾನದಲ್ಲಿನ ಆಸ್ಪತ್ರೆಯಲ್ಲಿ ಮಗು ಜನಿಸಿದರೆ ಕೇಡಾಗುತ್ತೆ ಅನ್ನೋ ಕಾರಣಕ್ಕೆ ಗರ್ಭಿಣಿಯರು ಚಿಕಿತ್ಸೆಗೆ ಇಲ್ಲಿಗೆ ಬರುತ್ತಿಲ್ಲ. ಮಗುವಿನ ಮುಂದಿನ ಭವಿಷ್ಯ ಚೆನ್ನಾಗಿರೋದಿಲ್ಲ ಅನ್ನೋ ಕಾರಣಕ್ಕೆ ಮಹಿಳೆಯರು ಬರುತ್ತಿಲ್ಲ.

Also read: ದೊಡ್ಡಬಳ್ಳಾಪುರ – ನೂರಾರು ವರ್ಷಗಳ ಸ್ಮಶಾನ ಜಾಗವನ್ನು ತನ್ನದೆಂದು ಗ್ರಾಮಸ್ಥರೊಬ್ಬರು ವಶಪಡಿಸಿಕೊಂಡಿದ್ದಾರೆ, ಮುಂದೇನು?

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us
Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More