ಬೀದರ್​ನಲ್ಲಿ ಭಾರಿ ಮಳೆಗೆ ವ್ಯಾಪಕ ಬೆಳೆ ಹಾನಿ: ಪರಿಶೀಲನೆಗೆ ಪ್ರವಾಹದ ನೀರಿಗೆ ಇಳಿದೇ ಬಿಟ್ಟ ಶಾಸಕ ಶರಣು ಸಲಗರ!

Updated on: Sep 27, 2025 | 5:34 PM

ಉತ್ತರ ಕರ್ನಾಟಕದ ವಿವಿಧ ಕಡೆಗಳಲ್ಲಿ ಭಾರಿ ಮಳೆ ಹಾಗೂ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಬೀದರ್​ನ ಬಸವಕಲ್ಯಾಣದಲ್ಲಿ ವ್ಯಾಪಕ ಬೆಳೆ ಹಾನಿ ಸಂಭವಿಸಿದೆ. ಶಾಸಕ ಶರಣು ಸಲಗರ ಶನಿವಾರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಸಕರು ಬೆಳೆ ಹಾನಿ ವೀಕ್ಷಿಸುತ್ತಿರುವ ವಿಡಿಯೋ ಇಲ್ಲಿದೆ.

ಬೀದರ್, ಸೆಪ್ಟೆಂಬರ್ 27: ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರಂತರ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಬೆಳೆ ಹಾನಿಯಾಗಿದೆ. ಬೆಳೆ ಹಾನಿ ಪ್ರದೇಶಗಳಿಗೆ ಶಾಸಕ ಶರಣು ಸಲಗರ ಭೇಟಿ ನೀಡಿ ಬೆಳೆ ಹಾನಿ ಪರಿಶೀಲನೆ ನಡೆಸಿದರು. ನಿರಂತರ ಮಳೆಯಿಂದಾಗಿ ರೈತರ ಹೊಲದಲ್ಲಿ ಎದೆ ಎತ್ತರದಷ್ಟು ನೀರು ನಿಂತುಕೊಂಡು ಕಟಾವಿಗೆ ಬಂದಿದ್ದ ಉದ್ದು ಹೆಸರು ಬೆಳೆ ಸಂಪೂರ್ಣ ಹಾನಿಯಾಗಿದೆ. ಅತಿಹೆಚ್ಚು ಬೆಳೆ ಹಾನಿಯಾದ ಗ್ರಾಮಗಳಿಗೆ ಹೋಗಿ ಶಾಸಕ ಶರಣು ಸಲಗರ ಬೆಳೆ ಹಾನಿ ಪರಿಶೀಲನೆ ಮಾಡಿದರು. ಗೌರ,ಖಂಡಾಳ,ಗುತ್ತಿ, ಮಿರಖಲ ಗ್ರಾಮಗಳಿಗೆ ಶಾಸಕ ಶರಣು ಸಲಗರ ಭೇಟಿ ನೀಡಿದರು. ಇದೇ ವೇಳೆ ಉಕ್ಕಿದ ನದಿಯ ಪ್ರವಾಹದ ಜಾಗದಲ್ಲಿ ಆಳ ನೋಡಲು ಇಳಿದೇ ಬಿಟ್ಟರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More