Video: ಈ ದೇವರ ದರ್ಶನ ಪಡೆಯಬೇಕೆಂದರೆ ಎದೆ ಎತ್ತರದ ನೀರಿನಲ್ಲಿ ಸಾಗಬೇಕು

Edited By:

Updated on: Sep 03, 2023 | 8:15 PM

ಬೀದರ್​ನ ಹೊರವಲಯದಲ್ಲಿರು ಪುರಾತನ ಉಘ್ರ ನರಸಿಂಹ ದೇವಸ್ಥಾನಕ್ಕೆ ಇಂದು ಭಕ್ತರ ದಂಡೆ ಹರಿದು ಬಂದಿತ್ತು. ಮಹಾರಾಷ್ಟ, ತೆಲಂಗಾಣ ಕರ್ನಾಟ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತೂಕೊಂಡು ದೇವರ ದರ್ಶನ ಪಡೆದರು. ಈ ದೇವಸ್ಥಾನದ ಐತಿಹಾಸಿಕ ದೇವಸ್ಥಾನವಾಗಿದ್ದು, ಎದೆ ಎತ್ತರದ ನೀರಿನಲ್ಲಿ ಇನ್ನೂರು ಮೀಟರ್ ಸಾಗಿ ದೇವರ ದರ್ಶನ ಪಡೆಯಬೇಕು.

ಬೀದರ್​, ಸೆಪ್ಟೆಂಬರ್​ 3: ಶ್ರಾವಣ ಮಾಸದ ರವಿವಾರ ಇರುವ ಕಾರಣಕ್ಕೆ ಬೀದರ್​ನ ಹೊರವಲಯದಲ್ಲಿರು ಪುರಾತನ ಉಘ್ರ ನರಸಿಂಹ (Ugra Narasimha) ದೇವಸ್ಥಾನಕ್ಕೆ ಇಂದು ಭಕ್ತರ ದಂಡೆ ಹರಿದು ಬಂದಿತ್ತು. ಮಹಾರಾಷ್ಟ, ತೆಲಂಗಾಣ ಕರ್ನಾಟ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತೂಕೊಂಡು ದೇವರ ದರ್ಶನ ಪಡೆದರು. ಈ ದೇವಸ್ಥಾನದ ಐತಿಹಾಸಿಕ ದೇವಸ್ಥಾನವಾಗಿದ್ದು, ಎದೆ ಎತ್ತರದ ನೀರಿನಲ್ಲಿ ಇನ್ನೂರು ಮೀಟರ್ ಸಾಗಿ ದೇವರ ದರ್ಶನ ಪಡೆಯಬೇಕು. ತೆಲಂಗಾಣ, ಮಹಾರಾಷ್ಟ್ರದಿಂದ ಅತಿ ಹೆಚ್ಚು ಭಕ್ತರು ಈ ದೇವಾಲಯಕ್ಕೆ ಬರುತ್ತಾರೆ. ಮುಖ್ಯವಾಗಿ ಶನಿವಾರ, ರವಿವಾರದಂದು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಬರುತ್ತಾರೆ. ಆರು ನೂರು ವರ್ಷದಷ್ಟು ಪುರಾತನ ದೇವಸ್ಥಾನ ಇದಾಗಿದೆ ಅಪಾರ ಅಪಾರ ಪ್ರಮಾಣದ ಭಕ್ತರು ಇಲ್ಲಿಗೆ ಬಂದು ದೇವರ ದರ್ಶನ ಪಡೆದುಕೊಂಡು ಹೋಗುತ್ತಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Sep 03, 2023 08:14 PM
Follow Us
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More