ಬೀದರ್: ಕಾರಂಜಾ ಜಲಾಶಯದಿಂದ ನೀರು ಬಿಡುಗಡೆ, ಇತಿಹಾಸ ಪ್ರಸಿದ್ಧ ಶಿವನ ದೇವಸ್ಥಾನ ಮುಳುಗಡೆ

Edited By: ಆಯೇಷಾ ಬಾನು

Updated on: Sep 06, 2023 | 1:15 PM

ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಈ ಪರಿಣಾಮ ಐತಿಹಾಸಿಕ ದೇವಾಲಯ ಮುಳುಗಡೆಯಾಗಿದೆ. ಕಟ್ಟಿತುಗಾಂವ ಬಳಿಯ ಇತಿಹಾಸ ಪ್ರಸಿದ್ಧ ಶಿವನ ದೇವಸ್ಥಾನ ಸಂಪೂರ್ಣ ಮುಳುಗಿದೆ. ಹೀಗಾಗಿ ನದಿ ದಡದಲ್ಲೇ ನಿಂತು ಭಕ್ತರು ದೇವರ ದರ್ಶನ ಮಾಡುತ್ತಿದ್ದಾರೆ.

ಬೀದರ್, ಸೆ.06: ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಹಾಲಹಳ್ಳಿ ಬಳಿಯ ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಜಲಾಶಯದಿಂದ ನದಿಗೆ 7594 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು ಈ ಪರಿಣಾಮ ಐತಿಹಾಸಿಕ ದೇವಾಲಯ ಮುಳುಗಡೆಯಾಗಿದೆ. ಕಟ್ಟಿತುಗಾಂವ ಬಳಿಯ ಇತಿಹಾಸ ಪ್ರಸಿದ್ಧ ಶಿವನ ದೇವಸ್ಥಾನ ಸಂಪೂರ್ಣ ಮುಳುಗಿದೆ. ಹೀಗಾಗಿ ನದಿ ದಡದಲ್ಲೇ ನಿಂತು ಭಕ್ತರು ದೇವರ ದರ್ಶನ ಮಾಡುತ್ತಿದ್ದಾರೆ. ಇನ್ನು ಶ್ರಾವಣ ಮಾಸ ಹಿನ್ನೆಲೆ ಶಿವ ಭಕ್ತರು ನಿತ್ಯ ಬೆಳಗ್ಗೆ, ಸಂಜೆ ಭಜನೆ ಮಾಡುತ್ತಿದ್ದರು. ನದಿ ನೀರಿನಿಂದಾಗಿ ದೇವಸ್ಥಾನ ಮುಳುಗಿದ್ದು ಭಕ್ತರ ಭಜನೆಗೆ ಬ್ರೇಕ್ ಬಿದ್ದಿದೆ.

ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More