ಬೀದರ್​ನಲ್ಲಿ ಬಿರುಗಾಳಿ ಸಹಿತ ಮಳೆ ಆರ್ಭಟ: ಬರೋಬ್ಬರಿ ಒಂದು ಎಕರೆಯಲ್ಲಿದ್ದ ಪಪ್ಪಾಯಿ ಬೆಳೆ ಸಂಪೂರ್ಣ ನಾಶ

Edited By:

Updated on: May 20, 2026 | 2:06 PM

ಬೀದರ್ ಜಿಲ್ಲೆಯಲ್ಲಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಯಿಂದ ಒಂದು ಎಕರೆಯಲ್ಲಿದ್ದ ಪಪ್ಪಾಯಿ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ರೈತ ಬಾಬ್ ಶೆಟ್ಟಿ ಒಂದೂವರೆ ಲಕ್ಷ ರೂಪಾಯಿ ಹೂಡಿಕೆ ಮಾಡಿದ್ದು, ನಾಲ್ಕೈದು ಲಕ್ಷ ರೂಪಾಯಿ ಆದಾಯ ನಿರೀಕ್ಷಿಸಿದ್ದರು. ಅಕಾಲಿಕ ಮಳೆಯಿಂದ ಬೆಳೆ ನಾಶವಾಗಿ ರೈತರು ನಷ್ಟ ಅನುಭವಿಸಿದ್ದಾರೆ.

ಬೀದರ್, ಮೇ 20: ಬೀದರ್ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯು ರೈತರ ಬದುಕಿಗೆ ಭಾರಿ ಹೊಡೆತ ನೀಡಿದೆ. ಬೀದರ್ ತಾಲೂಕಿನ ಕೊಳ್ಳಾರ ಬಿ ಗ್ರಾಮದ ಬಾಬ್ ಶೆಟ್ಟಿ ಅವರ ಒಂದು ಎಕರೆಯ ಪಪ್ಪಾಯಿ ತೋಟ ಸಂಪೂರ್ಣವಾಗಿ ನಾಶವಾಗಿದೆ. ಐದು ತಿಂಗಳ ಹಿಂದೆ ನಾಟಿ ಮಾಡಿದ್ದ ಪಪ್ಪಾಯಿ ಬೆಳೆ ಇನ್ನೆರಡು ತಿಂಗಳಲ್ಲಿ ಕಟಾವಿಗೆ ಬರಬೇಕಿತ್ತು. ರೈತರು ಈ ಬೆಳೆಯ ಮೇಲೆ ಸುಮಾರು ಒಂದರಿಂದ ಒಂದೂವರೆ ಲಕ್ಷ ರೂಪಾಯಿ ಖರ್ಚು ಮಾಡಿದ್ದರು. ಆದರೆ, ಭಾರಿ ಮಳೆಯಿಂದಾಗಿ ಪ್ರತಿಯೊಂದು ಗಿಡದ ಎಲೆಗಳು ಉದುರಿ, ಕಾಯಿಗಳೂ ಹಾನಿಗೊಂಡಿವೆ.

ಸಾಲ ಸೋಲ ಮಾಡಿ ಪಪ್ಪಾಯಿ ಬೆಳೆದಿದ್ದ ಬಾಬ್ ಶೆಟ್ಟಿ, ನಾಲ್ಕೈದು ಲಕ್ಷ ರೂಪಾಯಿ ಆದಾಯ ಗಳಿಕೆಯ ನಿರೀಕ್ಷೆಯಲ್ಲಿದ್ದರು. ಆದರೆ, ಅನಿರೀಕ್ಷಿತ ಮಳೆಯಿಂದ ಬೆಳೆ ಸಂಪೂರ್ಣವಾಗಿ ಹಾಳಾಗಿರುವುದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆಗಾಳಿ ಮತ್ತು ಆಲಿಕಲ್ಲು ಮಳೆ ರೈತರ ಬದುಕನ್ನು ಬರಬಾದ್ ಮಾಡಿದೆ ಎಂದು ಅವರು ಅಳಲನ್ನು ತೋಡಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 20, 2026 02:05 PM
Follow Us
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More