ಬೀದರ್: ಭಾಲ್ಕಿಯಲ್ಲಿ ಭೀಕರ ಅಪಘಾತ, ಬೈಕ್-ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಯುವಕರ ದುರ್ಮರಣ
ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ಏಪ್ರಿಲ್ 29 ರ ತಡರಾತ್ರಿ ನಡೆದ ಕಾರು-ಬೈಕ್ ಅಪಘಾತದಲ್ಲಿ ಮೂವರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ. ಇತ್ತ ಜಿಲ್ಲೆಯ ಹಾಲಹಳ್ಳಿ ಬಳಿ ವಿದ್ಯುತ್ ತಂತಿ ತಗುಲಿ ಮೇವಿನ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಜೆಸಿಬಿ ಮೂಲಕ ಮೇವು ತೆರವುಗೊಳಿಸಿ ಲಾರಿಯನ್ನು ರಕ್ಷಿಸಲಾಗಿದೆ.
ಬೀದರ್, ಏಪ್ರಿಲ್ 30: ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ ಬುಧವಾರ (ಏಪ್ರಿಲ್ 29) ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಮತ್ತು ಕಾರಿನ ನಡುವೆ ನಡೆದ ಈ ಮುಖಾಮುಖಿ ಡಿಕ್ಕಿ ಬೆಚ್ಚಿಬೀಳಿಸುವಂತಿದೆ. ಭಾಲ್ಕಿ ತಾಲ್ಲೂಕಿನ ಕಳಸದಾಳ ವ್ಯಾಪ್ತಿಯ ಮಹಾತ್ಮಾ ಗಾಂಧಿ ಸಕ್ಕರೆ ಕಾರ್ಖಾನೆಯ ಬಳಿ ದುರ್ಘಟನೆ ಸಂಭವಿಸಿದೆ. ಮೃತರನ್ನು ಕಳಸದಾಳ ಗ್ರಾಮದ ವಿಠ್ಠಲ ಪಾಂಚಾಳ (25), ಮಹೇಶ್ ಬಿರಾದಾರ (25) ಮತ್ತು ಕಾಕನಾಳ ಗ್ರಾಮದ ರಾಜೇಂದ್ರ ಪಾಂಚಾಳ (28) ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟು ಪ್ರಾಣ ಕಳೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಭಾಲ್ಕಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿದ್ಯುತ್ ತಂತಿ ತಗುಲಿ ಲಾರಿಗೆ ಬೆಂಕಿ
ಇನ್ನೊಂದೆಡೆ, ಭಾಲ್ಕಿ ತಾಲೂಕಿನ ಹಾಲಹಳ್ಳಿ ಗ್ರಾಮದ ಬಳಿ ಮೇವು ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಬೆಂಕಿ ಕಾಣಿಸಿಕೊಂಡಿದೆ. ಲಾರಿಯಲ್ಲಿ ತುಂಬಿದ್ದ ಒಣ ಮೇವಿಗೆ ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಚಾಲಕ ಮತ್ತು ಸ್ಥಳೀಯರು, ತಕ್ಷಣವೇ ಜೆಸಿಬಿ ಮೂಲಕ ಮೇವನ್ನು ಕೆಳಕ್ಕೆ ತಳ್ಳಿದ್ದಾರೆ. ಇದರಿಂದಾಗಿ ಇಡೀ ಲಾರಿ ಸುಟ್ಟು ಭಸ್ಮವಾಗುವುದು ತಪ್ಪಿದ್ದು, ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಬೆಂಕಿಯ ಕೆನ್ನಾಲಗೆಗೆ ಲಾರಿಯ ಹಿಂಭಾಗ ಭಾಗಶಃ ಸುಟ್ಟು ಕರಕಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Apr 30, 2026 02:29 PM
ನಾನ್ ವೆಜ್ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ

