AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು: ಸಂಬಂಧಿ ಹೇಳಿದ್ದಿಷ್ಟು

ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು: ಸಂಬಂಧಿ ಹೇಳಿದ್ದಿಷ್ಟು

ಸುರೇಶ ನಾಯಕ
| Edited By: |

Updated on: Feb 16, 2026 | 8:41 PM

Share

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮದ ಬಳಿ ಕಾರಂಜಾ ಡ್ಯಾಂ ಕಾಲುವೆಯಲ್ಲಿ ತಂದೆ ವಿಶ್ವನಾಥ (50) ಮತ್ತು ಮಗ ಅಮರೇಶ (23) ಮುಳುಗಿ ಮೃತಪಟ್ಟಿದ್ದಾರೆ. ಮಗಳ ಮದುವೆಯ ಸಾಲ ತೀರಿಸಲು ಕಷ್ಟಪಡುತ್ತಿದ್ದ ಈ ಕುಟುಂಬದ ಸದಸ್ಯರು, ಹಮಾಲಿ ಕೆಲಸ ಮಾಡುತ್ತಿದ್ದರು. ಸಂಬಂಧಿಕರು ಸರ್ಕಾರದಿಂದ ಸೂಕ್ತ ಪರಿಹಾರಕ್ಕೆ ಮನವಿ ಮಾಡಿದ್ದಾರೆ.

ಬೀದರ್, ಫೆಬ್ರವರಿ 16: ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮದ ಬಳಿ ಆಕಸ್ಮಿಕವಾಗಿ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದು ತಂದೆ, ಮಗ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಘಟನೆಗೆ ಮೃತರ ಸಂಬಂಧಿ ಟಿವಿ9 ಜೊತೆಗೆ ಮಾತನಾಡಿದ್ದು, ಮಗಳ ಮದುವೆ ಸಾಲ ತೀರಿಸುವುದಕ್ಕೆ ಹಗಲು ರಾತ್ರಿ ಕಷ್ಟಪಟ್ಟು ದುಡಿಯುತ್ತಿದ್ದರು. ಸಾಲದ ಹೊರೆ ಹೆಚ್ಚಾಗಿದ್ದರಿಂದ ತಂದೆ, ಮಗ ಲಾರಿ ಹಮಾಲಿ ಕೆಲಸ ಮಾಡುತ್ತಿದ್ದರು. ಕೆಲಸದ ನಡುವೆ ಕಾರಂಜಾ ಕಾಲುವೆ (ಬೆಳ್ಳೆ ಕೆನಲ್) ಬಳಿ ಕೈ, ಕಾಲು ತೊಳೆಯುವ ವೇಳೆ ಘಟನೆ ಸಂಭವಿಸಿ ಇಬ್ಬರು ಒಟ್ಟಿಗೆ ಪ್ರಾಣಬಿಟ್ಟಿದ್ದಾರೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.