ಬೀದರ್​: ನ.24ರಿಂದ ಎರಡು ದಿನಗಳ ಕಾಲ ಅನುಭವಮಂಟಪ ಉತ್ಸವ

Edited By: ವಿವೇಕ ಬಿರಾದಾರ

Updated on: Nov 19, 2024 | 2:57 PM

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನವೆಂಬರ್ 23 ಮತ್ತು 24 ರಂದು 45ನೇ ಶರಣ ಕಮ್ಮಟ ಮತ್ತು ಅನುಭವಮಂಟಪ ಉತ್ಸವ ಆಚರಿಸಲಾಗುವುದು. ಸಾಮೂಹಿಕ ಇಷ್ಟಲಿಂಗ ಪೂಜೆ, ವಿವಿಧ ಮಠಾಧೀಶರ ಚರ್ಚೆ, ನಗೆಯೋಗ ಕೂಟ ಮತ್ತು ಬಸವಕಲ್ಯಾಣದ ವಿಕಾಸದ ಕುರಿತ ಚರ್ಚೆಗಳು ನಡೆಯಲಿವೆ.

ಬೀದರ್​, ನವೆಂಬರ್​ 19: 45ನೇ ಶರಣ ಕಮ್ಮಟ (Sharan Kammat) ಮತ್ತು ಅನುಭವಮಂಟಪ ಉತ್ಸವ (Anubhavmantapa Utasva) ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣದಲ್ಲಿ (Basavakalyan) ನವೆಂಬರ್ 23 ಮತ್ತು 24 ರಂದು ಎರಡು ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ ಎಂದು ಅನುಭವ ಮಂಟಪದ ಅಧ್ಯಕ್ಷರು ಡಾ. ಬಸವಲಿಂಗ ಪಟ್ಟದೇವರು, ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಬೀದರ್​ನಲ್ಲಿ ಸುದ್ದಿಗೋಷ್ಠಿ ನಡೆಸುವುದರ ಮೂಲಕ ಮಾಹಿತಿ ಹಂಚಿಕೊಂಡರು. ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ಸಾಮೂಹಿಕ ಇಷ್ಟಲಿಂಗ ಪೊಜೆ, ಲಿಂಗಾಯತ ಹೋರಾಟ ಮುದೇನು ಎಂಬ ವಿಚಾರವಾಗಿ ವಿವಿಧ ಮಠಾಧೀಶರಿಂದ ಚರ್ಚಾಕೂಟ, ನಗೆಯೋಗ ಕೂಟ, ಬಸವಕಲ್ಯಾಣ ವಿಕಾಸ ಅಂದ-ಇಂದು-ಮುಂದು ವಿಚಾರವಾಗಿ ಚರ್ಚೆಗಳು ನಡೆಯಲಿವೆ ಎಂದು ತಿಳಿಸಿದರು.

ಇದನ್ನೂ ಓದಿ: ಬೀದರ್ ಗುಪ್ತಲಿಂಗೇಶ್ವರ ದೇವಾಲಯ: 5 ವರ್ಷದ ಬಳಿಕ ಜಲಪಾತಕ್ಕೆ ಸೃಷ್ಟಿ, ನಂದಿ ಬಾಯಿಂದ ಹರಿಯುವ ನೀರಿಗಿದೆ ಔಷಧಿ ಗುಣ

ಶರಣ ಕಮ್ಮಟ ಅನುಭವ ಮಂಟಪ ಉತ್ಸವದಲ್ಲಿ ಇಬ್ಬರು ಸಾಧಕರಾದ ಪದ್ಮಶ್ರೀ ಪುರಷ್ಕೃತರು ಡಾ. ಕೆ.ಎನ್. ರಾಜಣ್ಣ ಅವರಿಗೆ ಪೂಜ್ಯಶ್ರೀ ಡಾ. ಚನ್ನಬಸವ ಪಟ್ಟದೇವರ ಅನುಭವಮಂಟಪ ರಾಷ್ಟ್ರೀಯ ಪ್ರಶಸ್ತಿ ಕೊಟ್ಟು ಗೌರವಿಸಲಾಗುತ್ತದೆ. ಡಾ. ಎಂ.ಎಂ. ಕಲಬುರಗಿ ಸಾಹಿತ್ಯ ಸಂಶೋಧನಾ ರಾಷ್ಟ್ರೀಯ ಪ್ರಶಸ್ತಿಯನ್ನ ಗೌರವಾನ್ವಿತ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು ನಾಗಮೋಹನ್ ದಾಸ್ ಅವರಿಗೆ ಕೊಟ್ಟು ಗೌರವಿಸಲಾಗುತ್ತದೆ. ಎರಡು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಸಾವಿರರಾರು ಜನರು ಬರುವ ನಿರಿಕ್ಷೇಯಿದೆ ಎಂದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Nov 19, 2024 02:34 PM
Follow Us
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More