Karnataka Assembly Polls; ರಮೇಶ್ ಜಾರಕಿಹೊಳಿ ಕಾಟದಿಂದ ಬೇಸತ್ತ ಲಕ್ಷ್ಮಣ ಸವದಿಯನ್ನು ಡಿಕೆ ಶಿವಕುಮಾರ್ ಬೆಂಗಳೂರಿಗೆ ಕರೆಸಿಕೊಂಡರು!

ಅರುಣ್​ ಕುಮಾರ್​ ಬೆಳ್ಳಿ

Updated on: Apr 14, 2023 | 10:50 AM

ಸವದಿ ಜೊತೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ ಹಟ್ಟಿಹೊಳಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಸವದಿ ಕಾಂಗ್ರೆಸ್ ಪಕ್ಷ ಸೇರುವುದು ಆಲ್ಮೋಸ್ಟ್ ಖಚಿತ ಅಂತ ಹೇಳಲಾಗುತ್ತಿದೆ.

ಬೆಳಗಾವಿ: ರಮೇಶ್ ಜಾರಕಿಹೊಳಿ (Ramesh Jarkiholi) ಮತ್ತು ಲಕ್ಷ್ಮಣ ಸವದಿ (Laxman Savadi) ನಡುವಿವ ತಿಕ್ಕಾಟ ಮುಂದಿನ ಹಂತ ತಲುಪಿದೆ. ಇದನ್ನು ರಮೇಶ್ ಮತ್ತು ಡಿಕೆ ಶಿವಕುಮಾರ್ (DK Shivakumar) ನಡುವೆ ಬಹಳ ದಿನಗಳಿಂದ ಜಾರಿಯಲ್ಲಿರುವ ಕಿತ್ತಾಟದ ಮತ್ತೊಂದು ಹಂತ ಅಂದರೂ ತಪ್ಪಾಗಲಾರದು. ವಿಷಯವೇನೆಂದರೆ, ರಮೇಶ್ ರಿಂದಾಗಿ ಬಿಜೆಪಿಯಲ್ಲಿ ಮೂಲೆಗುಂಪಾಗಿರುವ ಲಕ್ಷ್ಮಣ ಸವದಿ ನಿನ್ನೆ ಬಿಜೆಪಿಯನ್ನು ತ್ಯಜಿಸುವ ಬಗ್ಗೆ ಮಾತಾಡಿದ್ದನ್ನು ವರದಿ ಮಾಡಿದ್ದೇವೆ. ಇಂದಿನ ಪ್ರಮುಖ ಬೆಳವಣಿಗೆಯೆಂದರೆ, ಸವದಿಯನ್ನು ಶಿವಕುಮಾರ್ ಒಂದು ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ. ಸವದಿ ಜೊತೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ ಹಟ್ಟಿಹೊಳಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಸವದಿ ಕಾಂಗ್ರೆಸ್ ಪಕ್ಷ ಸೇರುವುದು ಆಲ್ಮೋಸ್ಟ್ ಖಚಿತ ಅಂತ ಹೇಳಲಾಗುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 14, 2023 10:32 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.