ಆಂಧ್ರ ಪ್ರದೇಶದ ಐತಿಹಾಸಿಕ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ರಾಜವೊಮ್ಮಂಗಿ ಮಂಡಲದಲ್ಲಿ ಅಪರೂಪದ ಘಟನೆ ನಡೆದಿದೆ. ಜಡ್ಡಂಗಿ ಗ್ರಾಮದ ಹೊರವಲಯದ ಮದೇರು ನದಿಯ ಹೊಳೆಯಲ್ಲಿ ಆಂಜನೇಯ ಸ್ವಾಮಿಯ ಮೂರ್ತಿ ತೇಲಿಬಂದಿದೆ. ಅದೇ ವೇಳೆ ಆ ಮಾರ್ಗವಾಗಿ ಹೋಗುತ್ತಿದ್ದ ಅಜಯ್ ಎಂಬ ಯುವಕ ಪ್ರತಿಮೆಯನ್ನು ಕಂಡು ಹೌಹಾರಿದ್ದಾನೆ.
ಕೂಡಲೇ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ ಕೂಡಲೇ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಬಂದು ಸಮೀಪದ ರಾಮಮಂದಿರಕ್ಕೆ ತೆಗೆದುಕೊಂಡುಹೋಗಿದ್ದಾರೆ. ಬಳಿಕ ಗ್ರಾಮಸ್ಥರು ಆಂಜನೇಯ ಸ್ವಾಮಿ ವಿಗ್ರಹಕ್ಕೆ ಭಕ್ತಿಯಿಂದ ಪೂಜೆ ಸಲ್ಲಿಸಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:48 am, Fri, 4 October 24