ವಿಡಿಯೋ ನೋಡಿ: ಅಲ್ಲೂರಿ ಜಿಲ್ಲೆಯಲ್ಲಿ ಅದ್ಭುತ, ನದಿಯಲ್ಲಿ ಕೊಚ್ಚಿ ಬಂದ ಆಂಜನೇಯ ಸ್ವಾಮಿ ವಿಗ್ರಹ!

Updated on: Oct 04, 2024 | 2:06 PM

Alluri Sitaramaraju district Anjaneya Swamy: ಆಂಧ್ರ ಪ್ರದೇಶದ ಐತಿಹಾಸಿಕ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ರಾಜವೊಮ್ಮಂಗಿ ಮಂಡಲದಲ್ಲಿ ಅಪರೂಪದ ಘಟನೆ ನಡೆದಿದೆ. ಜಡ್ಡಂಗಿ ಗ್ರಾಮದ ಹೊರವಲಯದ ಮದೇರು ನದಿಯ ಹೊಳೆಯಲ್ಲಿ ಆಂಜನೇಯ ಸ್ವಾಮಿಯ ಮೂರ್ತಿ ತೇಲಿಬಂದಿದೆ.

ಆಂಧ್ರ ಪ್ರದೇಶದ ಐತಿಹಾಸಿಕ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ರಾಜವೊಮ್ಮಂಗಿ ಮಂಡಲದಲ್ಲಿ ಅಪರೂಪದ ಘಟನೆ ನಡೆದಿದೆ. ಜಡ್ಡಂಗಿ ಗ್ರಾಮದ ಹೊರವಲಯದ ಮದೇರು ನದಿಯ ಹೊಳೆಯಲ್ಲಿ ಆಂಜನೇಯ ಸ್ವಾಮಿಯ ಮೂರ್ತಿ ತೇಲಿಬಂದಿದೆ. ಅದೇ ವೇಳೆ ಆ ಮಾರ್ಗವಾಗಿ ಹೋಗುತ್ತಿದ್ದ ಅಜಯ್ ಎಂಬ ಯುವಕ ಪ್ರತಿಮೆಯನ್ನು ಕಂಡು ಹೌಹಾರಿದ್ದಾನೆ.

ಕೂಡಲೇ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ ಕೂಡಲೇ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಬಂದು ಸಮೀಪದ ರಾಮಮಂದಿರಕ್ಕೆ ತೆಗೆದುಕೊಂಡುಹೋಗಿದ್ದಾರೆ. ಬಳಿಕ ಗ್ರಾಮಸ್ಥರು ಆಂಜನೇಯ ಸ್ವಾಮಿ ವಿಗ್ರಹಕ್ಕೆ ಭಕ್ತಿಯಿಂದ ಪೂಜೆ ಸಲ್ಲಿಸಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 04, 2024 11:48 AM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More