ಭಯೋತ್ಪಾದನೆ ವಿರುದ್ಧ ನಮ್ಮ ಸರ್ಕಾರದ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ
ಮುಂಬೈ ದಾಳಿಯ ಆರೋಪಿ ತಹವ್ವೂರ್ ರಾಣಾ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆ ಆರೋಪಿ ಮುಂಬೈ ದಾಳಿಯಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಬಹಿರಂಗಪಡಿಸಲು ಸಹಾಯ ಮಾಡುತ್ತಾರೆ ಎಂದು ಹೇಳಿದ್ದಾರೆ. 26/11 ಮುಂಬೈ ದಾಳಿಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನೂ ಬಹಿರಂಗಪಡಿಸಲು ತಹವ್ವೂರ್ ರಾಣಾ ಅವರ ಹಸ್ತಾಂತರವು ಸಹಾಯ ಮಾಡುತ್ತದೆ ಎಂದು ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ನವದೆಹಲಿ, ಏಪ್ರಿಲ್ 10: 2008ರಲ್ಲಿ ನಡೆದ ಮುಂಬೈ ದಾಳಿಯ ಆರೋಪಿಯನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದೆ. ಭಾರತಕ್ಕೆ ಹಸ್ತಾಂತರವಾಗಿರುವ ರಾಣಾ ಅವರನ್ನು ಇಂದು ದೆಹಲಿಗೆ ಕರೆತರಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ, “ನಮ್ಮ ಸರ್ಕಾರವು ನಕ್ಸಲಿಸಂ ಮತ್ತು ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆಯ ವಿಧಾನವನ್ನು ಹೊಂದಿದೆ. ರಾಣಾ ಹಸ್ತಾಂತರ ಭಯೋತ್ಪಾದನೆಯ ವಿರುದ್ಧದ ಹೋರಾಟದತ್ತ ಒಂದು ದೊಡ್ಡ ಹೆಜ್ಜೆಯಾಗಿದೆ. 26/11 ಮುಂಬೈ ದಾಳಿಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನೂ ಬಹಿರಂಗಪಡಿಸಲು ತಹವ್ವೂರ್ ರಾಣಾ ಅವರ ಹಸ್ತಾಂತರವು ಸಹಾಯ ಮಾಡುತ್ತದೆ ” ಎಂದು ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

