ಇಬ್ಬರು ಮಕ್ಕಳನ್ನ ಕೊಂದು ತಾಯಿಯೂ ನೇಣಿಗೆ ಶರಣು: ಪೊಲೀಸ್ ತನಿಖೆಯಲ್ಲಿ ಸ್ಫೋಟಕ ಕಾರಣ ಬಯಲು
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬೆನಕಲ್ ಗ್ರಾಮದಲ್ಲಿ ಇದೇ ಅಕ್ಟೋಬರ್ 27ರಂದು ಇಬ್ಬರು ಮಕ್ಕಳನ್ನ ಕೊಂದು (Murder) ತಾಯಿಯೂ ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಕುಟುಂಬ ಕಲಹದಿಂದಾಗಿ ಮಹಿಳೆ ಈ ನಿರ್ಧಾರ ಮಾಡಿರಬಹುದೆಂದು ಮೊದಲು ಶಂಕಿಸಲಾಗಿತ್ತಾದರೂ ಪೊಲೀಸ್ ತನಿಖೆ ವೇಳೆ ಸ್ಫೋಟಕ ಸತ್ಯ ಹೊರಬಿದ್ದಿದೆ. ಪ್ರಕರಣದ ಹಿಂದೆ ಅಕ್ರಮ ಸಂಬಂಧದ ಕರಾಳ ಮುಖ ಇರುವುದು ಬಟಾಬಯಲಾಗಿದ್ದು, ತಾಯಿಯ ತಪ್ಪಿಗೆ ಅಮಾಯಕ ಇಬ್ಬರು ಮಕ್ಕಳೂ ಬಲಿಯಾಗಿವೆ.
ಕೊಪ್ಪಳ, (ಅಕ್ಟೋಬರ್ 28): ಜಿಲ್ಲೆಯ ಕುಕನೂರು ತಾಲೂಕಿನ ಬೆನಕಲ್ ಗ್ರಾಮದಲ್ಲಿ ಇದೇ ಅಕ್ಟೋಬರ್ 27ರಂದು ಇಬ್ಬರು ಮಕ್ಕಳನ್ನ ಕೊಂದು (Murder) ತಾಯಿಯೂ ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಕುಟುಂಬ ಕಲಹದಿಂದಾಗಿ ಮಹಿಳೆ ಈ ನಿರ್ಧಾರ ಮಾಡಿರಬಹುದೆಂದು ಮೊದಲು ಶಂಕಿಸಲಾಗಿತ್ತಾದರೂ ಪೊಲೀಸ್ ತನಿಖೆ ವೇಳೆ ಸ್ಫೋಟಕ ಸತ್ಯ ಹೊರಬಿದ್ದಿದೆ. ಪ್ರಕರಣದ ಹಿಂದೆ ಅಕ್ರಮ ಸಂಬಂಧದ ಕರಾಳ ಮುಖ ಇರುವುದು ಬಟಾಬಯಲಾಗಿದ್ದು, ತಾಯಿಯ ತಪ್ಪಿಗೆ ಅಮಾಯಕ ಇಬ್ಬರು ಮಕ್ಕಳೂ ಬಲಿಯಾಗಿವೆ. ಇನ್ನು ಮಕ್ಕಳಾದ ರಮೇಶ್(4), ಜಾನು(2) ನೇಣಿಗೆ ಹಾಕಿ ಕೊಂದು ಬಳಿಕ ತಾಯಿ ಲಕ್ಷ್ಮವ್ವ ಸಹ ನೇಣಿಗೆ ಶರಣಾಗಿದ್ದಳು. ಆದರಂಭದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ದಿ ಸ್ಫೋಟಕ ಅಂಶವನ್ನು ಬಿಚ್ಚಿಟ್ಟಿದ್ದಾರೆ.
'ಕೈ' ಟಿಕೆಟ್ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್ನ ಅತಿದೊಡ್ಡ ಎಲ್ಎನ್ಜಿ ಸ್ಥಾವರ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ

