ಇಬ್ಬರು ಮಕ್ಕಳನ್ನ ಕೊಂದು ತಾಯಿಯೂ ನೇಣಿಗೆ ಶರಣು: ಪೊಲೀಸ್ ತನಿಖೆಯಲ್ಲಿ ಸ್ಫೋಟಕ ಕಾರಣ ಬಯಲು

Updated on: Oct 28, 2025 | 7:24 PM

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬೆನಕಲ್ ಗ್ರಾಮದಲ್ಲಿ ಇದೇ ಅಕ್ಟೋಬರ್ 27ರಂದು ಇಬ್ಬರು ಮಕ್ಕಳನ್ನ ಕೊಂದು (Murder) ತಾಯಿಯೂ ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಕುಟುಂಬ ಕಲಹದಿಂದಾಗಿ ಮಹಿಳೆ ಈ ನಿರ್ಧಾರ ಮಾಡಿರಬಹುದೆಂದು ಮೊದಲು ಶಂಕಿಸಲಾಗಿತ್ತಾದರೂ ಪೊಲೀಸ್​ ತನಿಖೆ ವೇಳೆ ಸ್ಫೋಟಕ ಸತ್ಯ ಹೊರಬಿದ್ದಿದೆ. ಪ್ರಕರಣದ ಹಿಂದೆ ಅಕ್ರಮ ಸಂಬಂಧದ ಕರಾಳ ಮುಖ ಇರುವುದು ಬಟಾಬಯಲಾಗಿದ್ದು, ತಾಯಿಯ ತಪ್ಪಿಗೆ ಅಮಾಯಕ ಇಬ್ಬರು ಮಕ್ಕಳೂ ಬಲಿಯಾಗಿವೆ.

ಕೊಪ್ಪಳ, (ಅಕ್ಟೋಬರ್​ 28): ಜಿಲ್ಲೆಯ ಕುಕನೂರು ತಾಲೂಕಿನ ಬೆನಕಲ್ ಗ್ರಾಮದಲ್ಲಿ ಇದೇ ಅಕ್ಟೋಬರ್ 27ರಂದು ಇಬ್ಬರು ಮಕ್ಕಳನ್ನ ಕೊಂದು (Murder) ತಾಯಿಯೂ ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಕುಟುಂಬ ಕಲಹದಿಂದಾಗಿ ಮಹಿಳೆ ಈ ನಿರ್ಧಾರ ಮಾಡಿರಬಹುದೆಂದು ಮೊದಲು ಶಂಕಿಸಲಾಗಿತ್ತಾದರೂ ಪೊಲೀಸ್​ ತನಿಖೆ ವೇಳೆ ಸ್ಫೋಟಕ ಸತ್ಯ ಹೊರಬಿದ್ದಿದೆ. ಪ್ರಕರಣದ ಹಿಂದೆ ಅಕ್ರಮ ಸಂಬಂಧದ ಕರಾಳ ಮುಖ ಇರುವುದು ಬಟಾಬಯಲಾಗಿದ್ದು, ತಾಯಿಯ ತಪ್ಪಿಗೆ ಅಮಾಯಕ ಇಬ್ಬರು ಮಕ್ಕಳೂ ಬಲಿಯಾಗಿವೆ. ಇನ್ನು ಮಕ್ಕಳಾದ ರಮೇಶ್​(4), ಜಾನು(2) ನೇಣಿಗೆ ಹಾಕಿ ಕೊಂದು ಬಳಿಕ ತಾಯಿ ಲಕ್ಷ್ಮವ್ವ ಸಹ ನೇಣಿಗೆ ಶರಣಾಗಿದ್ದಳು. ಆದರಂಭದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ದಿ ಸ್ಫೋಟಕ ಅಂಶವನ್ನು ಬಿಚ್ಚಿಟ್ಟಿದ್ದಾರೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More