ಇಬ್ಬರು ಮಕ್ಕಳನ್ನ ಕೊಂದು ತಾಯಿಯೂ ನೇಣಿಗೆ ಶರಣು: ಪೊಲೀಸ್ ತನಿಖೆಯಲ್ಲಿ ಸ್ಫೋಟಕ ಕಾರಣ ಬಯಲು

Updated on: Oct 28, 2025 | 7:24 PM

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬೆನಕಲ್ ಗ್ರಾಮದಲ್ಲಿ ಇದೇ ಅಕ್ಟೋಬರ್ 27ರಂದು ಇಬ್ಬರು ಮಕ್ಕಳನ್ನ ಕೊಂದು (Murder) ತಾಯಿಯೂ ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಕುಟುಂಬ ಕಲಹದಿಂದಾಗಿ ಮಹಿಳೆ ಈ ನಿರ್ಧಾರ ಮಾಡಿರಬಹುದೆಂದು ಮೊದಲು ಶಂಕಿಸಲಾಗಿತ್ತಾದರೂ ಪೊಲೀಸ್​ ತನಿಖೆ ವೇಳೆ ಸ್ಫೋಟಕ ಸತ್ಯ ಹೊರಬಿದ್ದಿದೆ. ಪ್ರಕರಣದ ಹಿಂದೆ ಅಕ್ರಮ ಸಂಬಂಧದ ಕರಾಳ ಮುಖ ಇರುವುದು ಬಟಾಬಯಲಾಗಿದ್ದು, ತಾಯಿಯ ತಪ್ಪಿಗೆ ಅಮಾಯಕ ಇಬ್ಬರು ಮಕ್ಕಳೂ ಬಲಿಯಾಗಿವೆ.

ಕೊಪ್ಪಳ, (ಅಕ್ಟೋಬರ್​ 28): ಜಿಲ್ಲೆಯ ಕುಕನೂರು ತಾಲೂಕಿನ ಬೆನಕಲ್ ಗ್ರಾಮದಲ್ಲಿ ಇದೇ ಅಕ್ಟೋಬರ್ 27ರಂದು ಇಬ್ಬರು ಮಕ್ಕಳನ್ನ ಕೊಂದು (Murder) ತಾಯಿಯೂ ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಕುಟುಂಬ ಕಲಹದಿಂದಾಗಿ ಮಹಿಳೆ ಈ ನಿರ್ಧಾರ ಮಾಡಿರಬಹುದೆಂದು ಮೊದಲು ಶಂಕಿಸಲಾಗಿತ್ತಾದರೂ ಪೊಲೀಸ್​ ತನಿಖೆ ವೇಳೆ ಸ್ಫೋಟಕ ಸತ್ಯ ಹೊರಬಿದ್ದಿದೆ. ಪ್ರಕರಣದ ಹಿಂದೆ ಅಕ್ರಮ ಸಂಬಂಧದ ಕರಾಳ ಮುಖ ಇರುವುದು ಬಟಾಬಯಲಾಗಿದ್ದು, ತಾಯಿಯ ತಪ್ಪಿಗೆ ಅಮಾಯಕ ಇಬ್ಬರು ಮಕ್ಕಳೂ ಬಲಿಯಾಗಿವೆ. ಇನ್ನು ಮಕ್ಕಳಾದ ರಮೇಶ್​(4), ಜಾನು(2) ನೇಣಿಗೆ ಹಾಕಿ ಕೊಂದು ಬಳಿಕ ತಾಯಿ ಲಕ್ಷ್ಮವ್ವ ಸಹ ನೇಣಿಗೆ ಶರಣಾಗಿದ್ದಳು. ಆದರಂಭದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ದಿ ಸ್ಫೋಟಕ ಅಂಶವನ್ನು ಬಿಚ್ಚಿಟ್ಟಿದ್ದಾರೆ.

Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More