‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು ಹಾಕಿದ ಸ್ಪರ್ಧಿಗಳು

Updated on: Oct 18, 2024 | 8:06 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಶಾಕಿಂಗ್ ಬೆಳವಣಿಗೆ ನಡೆದಿದೆ. ಸ್ಪರ್ಧಿಗಳೆಲ್ಲರೂ ಜಗದೀಶ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದರಿಂದ ಜಗದೀಶ್ ಕೋಪಗೊಂಡಿದ್ದು ಮಹಿಳಾ ಸ್ಪರ್ಧಿಗಳ ವಿರುದ್ಧ ಅಶ್ಲೀಲ ಪದಗಳ ಬಳಕೆ ಮಾಡಿದ್ದಾರೆ. ಈ ಮಧ್ಯೆ ರಂಜಿತ್ ಅವರು ಜಗದೀಶ್ ಅವರನ್ನು ತಳ್ಳಿದ್ದಾರೆ. ಇದನ್ನು ಗಮನಿಸಿದ ಬಿಗ್ ಬಾಸ್ ಇಬ್ಬರನ್ನು ಹೊರಹಾಕಿದ್ದಾರೆ.

ಹೆಣ್ಣುಮಕ್ಕಳ ಬಗ್ಗೆ ಅವಾಚ್ಯ ಶಬ್ದ ಬಳಕೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಜಗದೀಶ್ ಅವರನ್ನು ಹಾಗೂ ಜಗದೀಶ್​ನ ತಳ್ಳಿದ ವಿಚಾರಕ್ಕೆ ಸಂಬಂಧಿಸಿ ರಂಜಿತ್​ನ ಬಿಗ್ ಬಾಸ್​ನಿಂದ ಹೊರಕ್ಕೆ ಕಳಿಸಲಾಗುತ್ತಿದೆ. ಈ ಎಲ್ಲಾ ವಿಚಾರವನ್ನು ಬಿಗ್ ಬಾಸ್ ಗಂಭೀರವಾಗಿ ಸ್ವೀಕರಿಸಿದ್ದಾರೆ. ಇವರನ್ನು ಹೊರಕ್ಕೆ ಕಳಿಸೋ ಆದೇಶವನ್ನು ಬಿಗ್ ಬಾಸ್ ನೀಡಿದ್ದಾರೆ. ‘ಇನ್ನೊಂದು ಅವಕಾಶ ಕೊಡಿ ಪ್ಲೀಸ್’ ಎಂದು ಬಿಗ್ ಬಾಸ್ ಬಳಿ ಸ್ಪರ್ಧಿಗಳು ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More