ಬಿಗ್ಬಾಸ್ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಸಾಕಷ್ಟು ವಿವಾದಗಳು ನಡೆದಿವೆ. ಈ ವಿವಾದದ ಬಗ್ಗೆ ಸಾಕಷ್ಟು ಚರ್ಚೆ ನಡೆದಿದೆ. ಈಗ ಕೇಸ್ ದಾಖಲಾಗಿದೆ. ಇದಕ್ಕೆ ಕಾರಣ ಸುದೀಪ್ ಬಳಿಕೆ ಮಾಡಿದ ಪದ. ಆ ಬಗ್ಗೆ ಇಲ್ಲಿದೆ ವಿವರ. ಇದರಿಂದ ಶೋ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ.
ಬಿಗ್ಬಾಸ್ ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲಾಗಿದೆ. ಇದಕ್ಕೆ ಕಾರಣ ಆಗಿದ್ದು ಸುದೀಪ್ ಬಳಕೆ ಮಾಡಿದ ಪದ. ರಣಹದ್ದುಗಳ ಬಗ್ಗೆ ನಟ ಸುದೀಪ್ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ದೂರು ದಾಖಲು ಮಾಡಲಾಗಿದೆ! ಸುದೀಪ್ ವಿರುದ್ಧ ಪಕ್ಷಿಪ್ರೇಮಿಗಳು ಹಾಗೂ ರಹಣದ್ದು ಸಂರಕ್ಷಣಾ ಟ್ರಸ್ಟ್ನಿಂದ ಬೆಂಗಳೂರು ದಕ್ಷಿಣ DFO ರಾಮಕೃಷ್ಣಪ್ಪಗೆ ದೂರು ದಾಖಲು ಮಾಡಲಾಗಿದೆ. ರಣಹದ್ದುಗಳು ಹೊಂಚು ಹಾಕಿ ಕರೆಕ್ಟ್ ಟೈಮ್ಗೆ ಹಿಡಿಯುತ್ತೆಂಬ ಹೇಳಿಕೆಯೇ ದೂರು ನೀಡಲು ಕಾರಣ! ಹದ್ದುಗಳ ಬಗ್ಗೆ ಸರಿಯಾದ ಮಾಹಿತಿಯನ್ನು ವೀಕ್ಷಕರಿಗೆ ತಿಳಿಸಬೇಕೆಂಬ ಆಗ್ರಹ ಕೇಳಿ ಬಂದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
