ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 11 ರಲ್ಲಿ ಉಗ್ರಂ ಮಂಜು ಅನ್ನು ರಾಜನನ್ನಾಗಿ ಮಾಡಿ ಅವರಿಗೆ ಕೆಲ ವಿಶೇಷ ಅಧಿಕಾರ ನೀಡಲಾಗಿತ್ತು. ಈಗ ಮೋಕ್ಷಿತಾ ಅನ್ನು ಮಹಾರಾಣಿಯನ್ನಾಗಿ ಮಾಡಿ ಅವರಿಗೆ ಕೆಲ ಅಧಿಕಾರ ನೀಡಲಾಗಿದೆ. ಇದು ಇಬ್ಬರ ನಡುವೆ ವೈಮನಸ್ಯಕ್ಕೆ ಕಾರಣವಾಗಿದೆ.
ಬಿಗ್ಬಾಸ್ ಮನೆಯಲ್ಲಿ ಈ ವಾರ ‘ರಾಜ-ರಾಣಿ’ ಟಾಸ್ಕ್ ನಡೆದಿದೆ. ಉಗ್ರಂ ಮಂಜು ಅನ್ನು ಮಹಾರಾಜ ಮಾಡಿದ್ದ ಬಿಗ್ಬಾಸ್ ಅವರಿಗೆ ಕೆಲವು ವಿಶೇಷ ಅಧಿಕಾರ ಕೊಟ್ಟಿದ್ದರು. ಅವರಿಗೆ ಮನೆಯ ಸದಸ್ಯರೆಲ್ಲರೂ ಗೌರವ ಕೊಡಬೇಕು, ಆಜ್ಞೆ ಪಾಲಿಸಬೇಕು ಎಂದಿದ್ದರು. ಆದರೆ ಈಗ ಟ್ವಿಸ್ಟ್ ಒಂದನ್ನು ಕೊಟ್ಟಿದ್ದು, ಮೋಕ್ಷಿತಾ ಅನ್ನು ಮಹಾರಾಣಿ ಮಾಡಿದ್ದಾರೆ. ಈಗ ಮಹಾರಾಜ ಮತ್ತು ಮಹಾರಾಣಿ ನಡುವೆ ವೈಮನಸ್ಯ ಶುರುವಾಗಿದೆ. ಇಬ್ಬರೂ ಪರಸ್ಪರ ಜೋರಾಗಿಯೇ ಕಿತ್ತಾಡಿದ್ದಾರೆ. ‘ನಿನ್ನದು ನರಿ ಕಣ್ಣೀರು’ ಎಂದು ಉಗ್ರಂ ಮಂಜು ಹೇಳಿದರೆ, ಅವರ ಮಾತಿಗೆ ‘ಥೂ’ ಎಂದು ಉಗಿದಿದ್ದಾರೆ ಮೋಕ್ಷಿತಾ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us