ಮಂಜಣ್ಣನ ಹೊಂದಾಣಿಕೆ ಆಟಕ್ಕೆ ಮುರಿಯಿತು ಗೆಳೆತನ

Updated on: Nov 05, 2024 | 4:51 PM

Bigg Boss Kannada: ಬಿಗ್​ಬಾಸ್ ಮನೆಯಲ್ಲಿ ಕೆಲವು ಗೆಳೆಯರಾಗಿದ್ದಾರೆ, ಕೆಲವು ಗುಂಪುಗಳಾಗಿವೆ. ಆದರೆ ಇದೀಗ ಟಾಸ್ಕ್​ನ ಕಾರಣಕ್ಕೆ ಕೆಲವು ಗೆಳೆತನಗಳು ಮುರಿದು ಬಿದ್ದಿವೆ.

ಬಿಗ್​ಬಾಸ್ ಕನ್ನಡ ಸೀಸನ್ 11 ರಲ್ಲಿ ಸ್ಪರ್ಧಿಗಳ ಸಂಖ್ಯೆ ದಿನೇ-ದಿನೇ ಕಡಿಮೆ ಆಗುತ್ತಿದೆ. ಸ್ಪರ್ಧಿಗಳ ನಡುವೆ ಗೆಲ್ಲಲು ತುರುಸಿನ ಸ್ಪರ್ಧೆ ಏರ್ಪಟ್ಟಿದೆ. ಏನಾದರೂ ಆಗಲಿ ಗೆದ್ದೇ ಗೆಲ್ಲಬೇಕು ಎಂಬ ಹಠ ಎಲ್ಲರಲ್ಲೂ ಮೂಡಿದೆ. ಕೆಲ ಸ್ಪರ್ಧಿಗಳು ಟಾಸ್ಕ್​ನ ಕಾರಣಕ್ಕೆ ಗೆಳೆಯರನ್ನು ಬಿಟ್ಟುಕೊಟ್ಟಿದ್ದಾರೆ, ಹೊಸ ಗೆಳೆತನಗಳನ್ನು ಪ್ರಾರಂಭ ಮಾಡಿದ್ದಾರೆ. ಚೆಂಡನ್ನು ಗೋಲ್​ಗೆ ತಳ್ಳುವ ಆಟದಲ್ಲಿ ಉಗ್ರಂ ಮಂಜು ಇನ್ನೊಂದು ತಂಡದ ಜೊತೆಗೆ ಕೈಜೋಡಿಸಿ ಗೆಳೆಯರಾದ ಗೌತಮಿಗೆ ಕೈಕೊಟ್ಟಿದ್ದಾರೆ. ಇದು ಗೌತಮಿಗೆ ತೀವ್ರ ಸಿಟ್ಟು ತರಿಸಿದೆ, ಮಂಜಣ್ಣನ ಗೆಳೆತನಕ್ಕೆ ಗೌತಮಿ ಎಳ್ಳು ನೀರು ಬಿಟ್ಟಂತೆ ತೋರುತ್ತಿದೆ. ಇಲ್ಲಿದೆ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More