‘ಬೊಗಳುವ ನಾಯಿಗೆ…’: ಹನುಮಂತನ ಹಾಡಿನ ಗುರಿ ಯಾರ ಕಡೆಗೆ?

Updated on: Nov 08, 2024 | 1:04 PM

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11 ಕ್ಕೆ ಎಂಟ್ರಿ ಕೊಟ್ಟಿರುವ ಹನುಮಂತು ಮನೆಯ ಸಮೀಕರಣವನ್ನೇ ಬದಲಾಯಿಸಿದ್ದಾರೆ. ತಮ್ಮ ಹಾಡಿನ ಮೂಲಕ ಆಗಾಗ್ಗೆ ಮನೆಯ ಸದಸ್ಯರಿಗೆ ಸಣ್ಣ ಸಂದೇಶಗಳನ್ನು ರವಾನಿಸುತ್ತಿದ್ದಾರೆ.

ಬಿಗ್​ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಂದ ಹನುಮಂತ ಮನೆಯ ಸಮೀಕರಣವನ್ನೇ ಬದಲಾಯಿಸಿದ್ದಾರೆ. ಟಾಸ್ಕ್​ಗಳಲ್ಲಿ ಅದ್ಭುತವಾಗಿ ಪ್ರದರ್ಶನ ನೀಡುತ್ತಿರುವ ಹನುಮಂತ, ಅದರ ಜೊತೆಗೆ ಮನೆಯವರನ್ನು ಹಾಗೂ ಪ್ರೇಕ್ಷಕರನ್ನು ತನ್ನ ಹಾಡು, ಒನ್​ಲೈನರ್ ಪಂಚುಗಳಿಂದಲೂ ರಂಜಿಸುತ್ತಿದ್ದಾರೆ. ತನ್ನ ಹಾಡಿನ ಮೂಲಕ ಅಭಿಪ್ರಾಯವನ್ನು ಹೊರಹಾಕುವ ಹನುಮಂತ, ಈಗ ಹೊಸ ಕ್ಯಾಪ್ಟನ್ ಕುರಿತು ಹಾಡೊಂದನ್ನು ಹಾಡಿದ್ದಾರೆ. ಹಾಡಿನಲ್ಲಿ ಹನುಮಂತ ಯಾರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದಿದ್ದಾರೆ? ನೀವೇ ಕೇಳಿ, ವಿಡಿಯೋ ಇಲ್ಲಿದೆ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More