AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ

ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ

ರಾಜೇಶ್ ದುಗ್ಗುಮನೆ
|

Updated on: Sep 18, 2026 | 3:27 PM

Share

ಬಿಗ್ ಬಾಸ್ ಮನೆಯ ಟಾಸ್ಕ್ ಒಂದರಲ್ಲಿ ಬಜರ್ ಒತ್ತುವ ವಿಚಾರಕ್ಕೆ ದೊಡ್ಡ ಗಲಾಟೆ ನಡೆದಿದೆ. ಸಂಚಾಲಕಿ ವೈಷ್ಣವಿ ನೀಡಿದ ತೀರ್ಪನ್ನು ಪ್ರಶ್ನಿಸಿದ ಗಗನ್ ಚಿನ್ನಪ್ಪ ಹಾಗೂ ತಾಂಡವ್ ರಾಮ್, ತಾವೇ ಮೊದಲು ಬಜರ್ ಒತ್ತಿದ್ದಾಗಿ ಆಕ್ರೋಶದ ವಾದ ಮಂಡಿಸಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ. ಇದು ಹಲವು ಚರ್ಚೆ ಹುಟ್ಟುಹಾಕಿದೆ. 

ಬಿಗ್ ಬಾಸ್ ಕನ್ನಡ ಮನೆ ಆಟ ಮತ್ತು ಗಲಾಟೆಗಳಿಗೆ ಹೆಸರುವಾಸಿಯಾಗಿದೆ. ಇದೀಗ ಹೊಸ ಪ್ರೋಮೋ ಹೊರಬಿದ್ದಿದ್ದು, ಟಾಸ್ಕ್ ಒಂದರಲ್ಲಿ ಸಂಚಾಲಕರ ನಿರ್ಧಾರವೇ ದೊಡ್ಡ ಗೊಂದಲ ಹಾಗೂ ಮಾತಿನ ಚಕಮಕಿಗೆ ಕಾರಣವಾಗಿದೆ. ಅಲ್ಲದೆ, ಗಗನ್ ಚಿನ್ನಪ್ಪ ಅವರ ನಿರ್ಧಾರ ಸಾಕಷ್ಟು ಕುತೂಹಲ ಮೂಡಿಸಿದೆ.

ಗಗನ್ ಅವರು ಸುಳ್ಳು ಹೇಳಿ ಸಿಕ್ಕಿ ಬಿದ್ದಿದ್ದಾರೆ. ಅಲ್ಲದೆ, ಉಸ್ತುವಾರಿಯ ನಿರ್ಧಾರ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಉಸ್ತುವಾರಿ ವೈಷ್ಣವಿ ಅವರು ಜಗದೀಶ್ ಬಂದು ಬಜರ್ ಒತ್ತಿದರು ಎಂದು ಘೋಷಿಸಿದ್ದಾರೆ. ಆದರೆ, ಇದಕ್ಕೆ ಒಪ್ಪದ ಗಗನ್ ಚಿನ್ನಪ್ಪ ತಾವು ಮೊದಲು ಬಜರ್ ಒತ್ತಿದ್ದಾಗಿ ಪ್ರಬಲವಾಗಿ ವಾದಿಸಿದ್ದಾರೆ.

‘ನಾನು ಯಾವತ್ತೂ ಗೇಮ್‌ನಲ್ಲಿ ಮೋಸ ಮಾಡಲ್ಲ’ ಎಂದು ಗಗನ್ ಕಿರುಚಾಡುತ್ತಾ ತಮ್ಮ ಪಾಯಿಂಟ್‌ ಅನ್ನು ಸಮರ್ಥಿಸಿಕೊಂಡರು. ಆ ಬಳಿಕ ತಾಂಡವ್ ಮೊದಲು ಬಜರ್ ಒತ್ತಿದ್ದರು. ಈ ವೇಳೆ ವೈಷ್ಣವಿ, ಗಗನ್ ಚಿನ್ನಪ್ಪ ಮೊದಲು ಬಜರ್ ಒತ್ತಿದ್ದು ಎಂದರು. ಆಗ ಗಗನ್ ಸೈಲೆಂಟ್ ಆಗಿ ಇದ್ದರು. ಇದು ಪ್ರಶ್ನೆಯನ್ನು ಹುಟ್ಟುಹಾಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us