ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ

|

Updated on: Oct 05, 2024 | 8:19 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಾರೆ ಜಗದೀಶ್. ನೆಗಟಿವ್ ಆಗಲಿ ಅಥವಾ ಪೊಸಿಟಿವ್ ಆಗಲಿ ತಾವು ಚರ್ಚೆ ಆಗಬೇಕು ಎಂಬುದು ಅವರ ಉದ್ದೇಶ. ಇದಕ್ಕಾಗಿ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಸುದೀಪ್ ಅವರು ಈ ವಿಚಾರದಲ್ಲಿ ಕ್ಲಾಸ್ ತೆಗೆದುಕೊಳ್ಳಲಿ ಎಂದು ಎಲ್ಲರೂ ಆಶಿಸುತ್ತಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮೊದಲ ‘ಕಿಚ್ಚನ ಪಂಚಾಯ್ತಿ’ ಇಂದು (ಸೆಪ್ಟೆಂಬರ್ 5) ನಡೆಯಲಿದೆ. ಇದಕ್ಕಾಗಿ ಎಲ್ಲರೂ ಕಾದಿದ್ದಾರೆ. ಮೊದಲ ವಾರವೇ ಬಿಗ್ ಬಾಸ್​ನಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದಿವೆ. ಈ ಮಧ್ಯೆ ಜಗದೀಶ್, ಯಮುನಾ, ಹಂಸ, ಭವ್ಯಾ, ಗೌತಮಿ, ಚೈತ್ರಾ, ಶಿಶಿರ್, ಮೋಕ್ಷಿತಾ ಹಾಗೂ ಮಾನಸ ಮೇಲೆ ನಾಮಿನೇಷನ್ ತೂಗುಗತ್ತಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us on