‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ

Updated on: Nov 23, 2024 | 4:33 PM

Bigg Boss Kannada: ಮನೆಯಲ್ಲಿನ ಅವಾಚ್ಯ ಶಬ್ದಗಳನ್ನು ಬಳಸಿ ಮಾತನಾಡಿದ್ದಕ್ಕೆ ಲಾಯರ್ ಜಗದೀಶ್ ಅನ್ನು ಮನೆಯಿಂದ ಹೊರಗಟ್ಟಲಾಗಿದೆ. ಇದೀಗ ಅವರಂತೇ ನಾಲಗೆ ಮೇಲೆ ಲಗಾಮಿಲ್ಲದ ರಜತ್ ಮನೆ ಸೇರಿಕೊಂಡಿದ್ದಾರೆ. ಶನಿವಾರದ ಎಪಿಸೋಡ್​ನಲ್ಲಿ ಸುದೀಪ್, ನಗುತ್ತಲೇ ರಜತ್​ಗೆ ಎಚ್ಚರಿಕೆ ನೀಡಿದ್ದಾರೆ.

ಬಿಗ್​ಬಾಸ್​ ಕನ್ನಡ ಸೀಸನ್ 11 ರಲ್ಲಿ ಈ ವಾರ ಮನೆಯಲ್ಲಿ ಸಾಕಷ್ಟು ಘಟನೆಗಳು ನಡೆದಿವೆ. ಸ್ಪರ್ಧಿಗಳೊಂದಿಗೆ ಕೆಟ್ಟದಾಗಿ ವರ್ತಿಸಿದ್ದಕ್ಕೆ, ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಕ್ಕೆ ಈಗಾಗಲೇ ಲಾಯರ್ ಜಗದೀಶ್ ಅನ್ನು ಹೊರಗೆ ಕಳಿಸಲಾಗಿದೆ. ಇದೀಗ ಜಗದೀಶ್​ ಸಹೋದರ ಒಬ್ಬ ಮನೆಗೆ ಬಂದಿದ್ದಾರೆ ಆತನ ಹೆಸರೇ ರಜತ್. ಜಗದೀಶ್​ ರೀತಿಯೇ ಹೊಲಸು ಮಾತುಗಳನ್ನು ಆಡುತ್ತಾ ಮನೆಯ ಇತರೆ ಸದಸ್ಯರಿಗೆ ಕಿರಿಕಿರಿ ನೀಡುತ್ತಿದ್ದಾರೆ. ಶನಿವಾರ ಬಂದಿದ್ದು ಸುದೀಪ್ ಬಂದಿದ್ದಾರೆ. ಮನೆಯ ಸದಸ್ಯರ ಬಗ್ಗೆ ಅವಾಚ್ಯವಾಗಿ ಮಾತನಾಡಿದ ರಜತ್​ಗೆ ನಗುತ್ತಲೇ ಎಚ್ಚರಿಕೆ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More