ಸೀಸನ್ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ: ಧನರಾಜ್ಗೆ ಢವ-ಢವ
Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 11ರ ಫಿನಾಲೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಸೀಸನ್ನ ಕೊನೆಯ ವಾರದ ಪಂಚಾಯಿತಿ ಇಂದು (ಜನವರಿ 18) ನಡೆಯಲಿದೆ. ಸೀಸನ್ನ ಕೊನೆಯ ವಾರದ ಪಂಚಾಯಿತಿ ನಡೆಸಿಕೊಡಲು ಕಿಚ್ಚನ ಆಗಮನ ಆಗಿದೆ. ಧನರಾಜ್ಗೆ ಈಗಾಗಲೇ ನಡುಕ ಶುರುವಾಗಿದೆ. ಈ ವಾರದ ಪಂಚಾಯಿತಿ ಹಲವು ಕಾರಣಗಳಿಗೆ ಮಹತ್ವದ್ದಾಗಿರಲಿದೆ.
ಬಿಗ್ಬಾಸ್ ಕನ್ನಡ ಸೀಸನ್ 11 ಮುಕ್ತಾಯವಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಸೀಸನ್ನ ಕೊನೆ ಪಂಚಾಯಿತಿ ಇಂದು ನಡೆಯಲಿದೆ. ಸೀಸನ್ನ ಕೊನೆಯ ಪಂಚಾಯಿತಿ ಮಾಡಲು ಸುದೀಪ್ ತೋಳು ಮೇಲೇರಿಸಿಕೊಂಡು ಬಂದಿದ್ದಾರೆ. ಇದು ಧನರಾಜ್ಗೆ ನಡುಕ ಹುಟ್ಟಿಸಿದೆ. ಬಿಗ್ಬಾಸ್ ಇತಿಹಾಸದಲ್ಲಿ ಮೊದಲ ಬಾರಿಗೆ ಮಿಡ್ ವೀಕ್ ಎಲಿಮಿನೇಷನ್ ರದ್ದಾಗಿದೆ. ಇದಕ್ಕೆ ಧನರಾಜ್ ಕಾರಣವಾಗಿದ್ದಾರೆ. ಈ ಬಗ್ಗೆ ಸುದೀಪ್ ಮಾತನಾಡಲಿದ್ದಾರೆ. ಧನರಾಜ್ ಈಗಾಗಲೇ ತಪ್ಪು ಒಪ್ಪಿಕೊಂಡಿದ್ದಾರೆ. ಆದರೆ ಸುದೀಪ್ ಇದಕ್ಕೆ ಹೇಗೆ ಪ್ರತಿಕ್ರಿಯೆ ನೀಡಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ. ಮಾತ್ರವಲ್ಲದೆ ನಾಮಿನೇಷನ್ನಿಂದ ಈ ವಾರ ತಪ್ಪಿಸಿಕೊಳ್ಳುವರು ಯಾರೆಂಬುದು ಸಹ ಕುತೂಹಲ ಕೆರಳಿಸಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್ಡಿಕೆ ಮನವಿ

