AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ: ಧನರಾಜ್​ಗೆ ಢವ-ಢವ

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ: ಧನರಾಜ್​ಗೆ ಢವ-ಢವ

ಮಂಜುನಾಥ ಸಿ.
|

Updated on: Jan 18, 2025 | 1:47 PM

Share

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11ರ ಫಿನಾಲೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಸೀಸನ್​ನ ಕೊನೆಯ ವಾರದ ಪಂಚಾಯಿತಿ ಇಂದು (ಜನವರಿ 18) ನಡೆಯಲಿದೆ. ಸೀಸನ್​ನ ಕೊನೆಯ ವಾರದ ಪಂಚಾಯಿತಿ ನಡೆಸಿಕೊಡಲು ಕಿಚ್ಚನ ಆಗಮನ ಆಗಿದೆ. ಧನರಾಜ್​ಗೆ ಈಗಾಗಲೇ ನಡುಕ ಶುರುವಾಗಿದೆ. ಈ ವಾರದ ಪಂಚಾಯಿತಿ ಹಲವು ಕಾರಣಗಳಿಗೆ ಮಹತ್ವದ್ದಾಗಿರಲಿದೆ.

ಬಿಗ್​ಬಾಸ್ ಕನ್ನಡ ಸೀಸನ್ 11 ಮುಕ್ತಾಯವಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಸೀಸನ್​ನ ಕೊನೆ ಪಂಚಾಯಿತಿ ಇಂದು ನಡೆಯಲಿದೆ. ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ಸುದೀಪ್ ತೋಳು ಮೇಲೇರಿಸಿಕೊಂಡು ಬಂದಿದ್ದಾರೆ. ಇದು ಧನರಾಜ್​ಗೆ ನಡುಕ ಹುಟ್ಟಿಸಿದೆ. ಬಿಗ್​ಬಾಸ್​ ಇತಿಹಾಸದಲ್ಲಿ ಮೊದಲ ಬಾರಿಗೆ ಮಿಡ್ ವೀಕ್ ಎಲಿಮಿನೇಷನ್ ರದ್ದಾಗಿದೆ. ಇದಕ್ಕೆ ಧನರಾಜ್ ಕಾರಣವಾಗಿದ್ದಾರೆ. ಈ ಬಗ್ಗೆ ಸುದೀಪ್ ಮಾತನಾಡಲಿದ್ದಾರೆ. ಧನರಾಜ್ ಈಗಾಗಲೇ ತಪ್ಪು ಒಪ್ಪಿಕೊಂಡಿದ್ದಾರೆ. ಆದರೆ ಸುದೀಪ್ ಇದಕ್ಕೆ ಹೇಗೆ ಪ್ರತಿಕ್ರಿಯೆ ನೀಡಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ. ಮಾತ್ರವಲ್ಲದೆ ನಾಮಿನೇಷನ್​ನಿಂದ ಈ ವಾರ ತಪ್ಪಿಸಿಕೊಳ್ಳುವರು ಯಾರೆಂಬುದು ಸಹ ಕುತೂಹಲ ಕೆರಳಿಸಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More