ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
Bigg Boss Kannada: ಬಿಗ್ಬಾಸ್ ಮನೆಯಲ್ಲಿ ಕಳೆದ ವಾರ ಸಾಕಷ್ಟು ಬೆಳವಣಿಗೆಗಳು ನಡೆದಿವೆ. ಇಬ್ಬರು ಸ್ಪರ್ಧಿಗಳನ್ನು ಮನೆಯಿಂದ ಹೊರಗೆ ಹಾಕಲಾಗಿದೆ. ಇಂದು ಸುದೀಪ್ ವಾರದ ಪಂಚಾಯಿತಿ ನಡೆಸುತ್ತಿದ್ದು, ಮನೆಯ ಎಲ್ಲ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ಬಿಗ್ಬಾಸ್ ಕನ್ನಡ ಸೀಸನ್ 11ರ ವೀಕೆಂಡ್ ಪಂಚಾಯಿತಿ ಇಂದು (ಅಕ್ಟೋಬರ್ 19) ನಡೆಯಲಿದೆ. ಪ್ರತಿ ಬಾರಿಯಂತೆ ಕಿಚ್ಚ ಸುದೀಪ್ ವಾರದ ಪಮಚಾಯಿತಿ ನಡೆಸಿಕೊಡಲಿದ್ದಾರೆ. ಈ ವಾರ ಅವರಿಗೆ ತುಸು ಹೆಚ್ಚೇ ಕೆಲಸ ಇದೆ. ಈ ವಾರ ಮನೆಯಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದಿವೆ. ಮನೆಯಲ್ಲಿ ದೊಡ್ಡ ಜಗಳವೇ ನಡೆದು ಇಬ್ಬರು ಮನೆಯಿಂದ ಹೊರಗೆ ಹೋಗಿದ್ದಾರೆ. ಇದೀಗ ಸುದೀಪ್, ಮನೆಯ ಇತರ ಸದಸ್ಯರನ್ನು ಸರಿಯಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಅವರಿಬ್ಬರು ಮಾಡಿದ್ದು ತಪ್ಪಾದರೆ ನೀವು ಮಾಡಿದ್ದೇನು? ಎಂದು ಸುದೀಪ್ ಪ್ರಶ್ನೆ ಮಾಡಿದ್ದಾರೆ. ಮಾತ್ರವಲ್ಲದೆ ಉಗ್ರಂ ಮಂಜು, ಚೈತ್ರಾ ಕುಂದಾಪುರ, ಮಾನಸಾಗಂತೂ ತುಸು ಗಟ್ಟಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಈಗ ಬಿಡುಗಡೆ ಆಗಿರುವ ಪ್ರೋಮೋ ನೋಡಿದರೆ ಎಲ್ಲರನ್ನೂ ಒಟ್ಟಿಗೆ ಎಲಿಮಿನೇಟ್ ಮಾಡಿಬಿಡುತ್ತಾರಾ ಎಂಬ ಅನುಮಾನವೂ ಮೂಡಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್ ಫೈಟ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ

