‘ನಿನ್ನತ್ರ ಇರೋ ಎರಡು ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕೆಂಬ ಆಸೆ ಇದೆ’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು

Updated on: Jan 21, 2025 | 8:16 AM

ಇದು ಫಿನಾಲೆ ವಾರ. ಈ ವಾರ ಯಾವುದೇ ಟಾಸ್ಕ್​ಗಳನ್ನು ಬಿಗ್ ಬಾಸ್ ನೀಡುವುದಿಲ್ಲ. ಹೀಗಾಗಿ, ನಾನಾ ರೀತಿಯ ಚಟುವಟಿಕೆಗಳನ್ನು ಬಿಗ್ ಬಾಸ್ ನೀಡುತ್ತಾ ಇದ್ದಾರೆ. ಅದೇ ರೀತಿ ಫಿನಾಲೆ ವಾರದ ಎರಡನೇ ದಿನ ಬಿಗ್ ಬಾಸ್ ಚಟುವಟಿಕೆ ಒಂದನ್ನು ನೀಡಿದ್ದರು. ಆ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಚಟುವಟಿಕೆ ಒಂದನ್ನು ನೀಡಲಾಗಿದೆ. ಟ್ರೋಫಿಯನ್ನು ನೋಡಿ ಮನದಾಳದ ಮಾತನ್ನು ಸ್ಪರ್ಧಿಗಳು ಹೇಳಬೇಕು. ಈ ವೇಳೆ ಹನುಮಂತ ಅವರು ‘ಯವ್ವಾ ಗರುಡವ್ವ’ ಎಂದಿದ್ದಾರೆ. ಟ್ರೋಫಿ ಗರುಡ ದೇವತೆ ಅಂತೆ ಕಂಡಿದೆ. ತ್ರಿವಿಕ್ರಂ ಅವರಿಗೆ ಕಪ್ ಗೆದ್ದರೆ ಮುಂದಿನ ಭವಿಷ್ಯ ಉತ್ತಮವಾಗಿರುತ್ತದೆ ಎನಿಸಿದೆ. ‘ನಿನ್ನತ್ರ ಇರೋ ಎರಡು ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕೆಂಬ ಆಸೆ ಇದೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More