AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್

ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್

ಮಂಜುನಾಥ ಸಿ.
|

Updated on:Jan 17, 2025 | 5:27 PM

Share

Bigg Boss Kannada season 11: ಬಿಗ್​ಬಾಸ್ ಫಿನಾಲೆಗೆ ಕೆಲವೇ ದಿನಗಳು ಬಾಕಿ ಇದೆ. ಈ ಸೀಸನ್​ನ ಕಟ್ಟ ಕಡೆಯ ನಾಮಿನೇಷನ್ ನಡೆದಿದೆ. ಪ್ರತಿಯೊಬ್ಬರೂ ಸಹ ಈ ವಾರ ಹೇಗಾದರೂ ಉಳಿದುಕೊಳ್ಳೋಣ ಎಂಬ ಪ್ರಯತ್ನದಲ್ಲಿದ್ದಾರೆ. ನಾಮಿನೇಷನ್ ಪ್ರಕ್ರಿಯೆಯಲ್ಲಿ ಉಗ್ರಂ ಮಂಜು ಟಾರ್ಗೆಟ್ ಆದಂತಿದೆ.

ಬಿಗ್​ಬಾಸ್ ಕನ್ನಡ ಸೀಸನ್ 11 ಮುಗಿಯಲು ಇನ್ನೊಂದು ವಾರವಷ್ಟೆ ಬಾಕಿ ಇದೆ. ಮುಂದಿನ ವಾರ ಫಿನಾಲೆ ವಾರ. ಇದೀಗ ಈ ಸೀಸನ್​ನ ಕೊನೆಯ ನಾಮಿನೇಷನ್ಸ್​ ನಡೆದಿದೆ. ಈ ನಾಮಿನೇಷನ್ಸ್ ಭಾರಿ ಕುತೂಹಲ ಕೆರಳಿಸಿದೆ. ಈ ನಾಮಿನೇಷನ್​ನಲ್ಲಿ ಬಚಾವಾದವರು ಫಿನಾಲೆಗೆ ಪಕ್ಕಾ ಇರಲಿದ್ದಾರೆ. ಹಾಗಾಗಿ ಈ ನಾಮಿನೇಷನ್ ಅತ್ಯಂತ ಮಹತ್ವದ್ದಾಗಿದೆ. ಆದರೆ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಉಗ್ರಂ ಮಂಜು ಟಾರ್ಗೆಟ್ ಆದಂತಿದೆ. ಅದೂ ಗೌತಮಿಯ ಕಾರಣಕ್ಕೆ. ಧನರಾಜ್, ಭವ್ಯಾ ಇನ್ನಿತರರು ಮುಗಿಬಿದ್ದು ಮಂಜು ಅವರನ್ನು ನಾಮಿನೇಟ್ ಮಾಡಿದ್ದಾರೆ. ಈ ವಾರ ನಾಮಿನೇಟ್ ಆದವರು ಯಾರು? ಉಳಿದುಕೊಂಡವರು ಯಾರು? ಪ್ರೋಮೋ ಇಲ್ಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jan 17, 2025 05:26 PM

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More