AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಗೆ ಹೋಗಿದ್ದು ಅಶ್ವಿನಿ, ಗಿಲ್ಲಿಗೆ ಠಕ್ಕರ್ ಕೊಡೋಕಾ? ಸ್ಪಷ್ಟನೆ ಕೊಟ್ಟ ಚೈತ್ರಾ

ಬಿಗ್ ಬಾಸ್ ಮನೆಗೆ ಹೋಗಿದ್ದು ಅಶ್ವಿನಿ, ಗಿಲ್ಲಿಗೆ ಠಕ್ಕರ್ ಕೊಡೋಕಾ? ಸ್ಪಷ್ಟನೆ ಕೊಟ್ಟ ಚೈತ್ರಾ

ರಾಜೇಶ್ ದುಗ್ಗುಮನೆ
|

Updated on: Dec 22, 2025 | 11:07 AM

Share

ಬಿಗ್ ಬಾಸ್ ಕನ್ನಡ ಸೀಸನ್ 11 ಸ್ಪರ್ಧಿಗಳಾಗಿದ್ದ ಚೈತ್ರಾ ಹಾಗೂ ರಜತ್ ಅವರು ಬಿಗ್ ಬಾಸ್ ಮನೆಗೆ ತೆರಳೋ ಅವಕಾಶ ಪಡೆದರು. ಮೊದಲು ಅತಿಥಿಗಳಾಗಿದ್ದ ಅವರು ನಂತರ ಅವರು ಸ್ಪರ್ಧಿಗಳಾದರು. ಅವರು ದೊಡ್ಮನೆಗೆ ಹೋಗಿದ್ದು ಏಕೆ ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಅವರ ಉತ್ತರ ಬಹುತೇಕರಿಗೆ ನಿಜ ಎನಿಸಿದೆ.

ಬಿಗ್ ಬಾಸ್ ಮನೆಗೆ ಒಟ್ಟಿಗೆ ತೆರಳಿದ್ದ ರಜತ್ ಹಾಗೂ ಚೈತ್ರಾ ಒಟ್ಟಿಗೆ ಎಲಿಮಿನೇಟ್ ಆದರು. ಅಶ್ವಿನಿಗೆ ಠಕ್ಕರ್ ಕೊಡೋಕೆ ಚೈತ್ರಾ, ಗಿಲ್ಲಿಗೆ ಠಕ್ಕರ್ ಕೊಡೋಕೆ ರಜತ್ ಹೋಗಿದ್ದರು ಎಂಬ ಮಾತಿತ್ತು. ಈ ಮಾತನ್ನು ಚೈತ್ರಾ ಅವರು ಅಲ್ಲಗಳೆದಿದ್ದಾರೆ. ‘ಆ ರೀತಿ ಇಲ್ಲ’ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಇವರು ಹೊರಗಿನಿಂದ ಆಟ ನೋಡಿಕೊಂಡು ಹೋಗಿರುತ್ತಾರೆ. ಯಾವುದಾದರೂ ಸ್ಪರ್ಧಿಗಳಿಗೆ ಏನಾದರೂ ಬದಲಾವಣೆ ಬೇಕು ಎಂದಾಗ ಅದನ್ನು ಮಾಡುವ ಕೆಲಸವನ್ನು ಇವರು ಮಾಡಿದ್ದಾರಂತೆ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More