ಮಂಜನ ಮಾತಿನಿಂದ ಬಿಗ್ ಬಾಸ್ ಸ್ಪರ್ಧಿಗಳಿಗೆ ಕಿರಿಕಿರಿ; ಕಣ್ಣೀರು ಹಾಕಿದ ಸೌಂದರ್ಯಾ

Updated on: Sep 10, 2026 | 8:23 PM

ಬಿಗ್ ಬಾಸ್ ಮನೆಗೆ ಕಾಲಿಟ್ಟಿರುವ ಕಾಮನರ್ ಮಂಜನ ಮಾತುಗಳು ಎಲ್ಲರಿಗೂ ಕಿರಿಕಿರಿ ಉಂಟುಮಾಡುತ್ತಿವೆ. ಸುಮ್ಮನಿರಿ ಎಂದು ಬೇರೆಯವರು ವಿನಂತಿ ಮಾಡಿದರೂ ಮಂಜ ಸುಮ್ಮನಾಗುತ್ತಿಲ್ಲ. ಸೌಂದರ್ಯ ಶೆಟ್ಟಿ ಕಣ್ಣೀರು ಹಾಕುವ ಪರಿಸ್ಥಿತಿ ಬಂದಿದೆ. ಸೆಪ್ಟೆಂಬರ್ 10 ಸಂಚಿಕೆಯ ಈ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ.

ಕಾಮನರ್ ಆಗಿ ಬಿಗ್ ಬಾಸ್ ಮನೆಗೆ ಕಾಲಿಟ್ಟಿರುವ ಮಂಜನ ಮಾತುಗಳು ಎಲ್ಲರಿಗೂ ಕಿರಿಕಿರಿ ಉಂಟುಮಾಡುತ್ತಿವೆ. ಸುಮ್ಮನಿರಿ ಎಂದು ಬೇರೆಯವರು ವಿನಂತಿ ಮಾಡಿದರೂ ಕೂಡ ಮಂಜ ಸುಮ್ಮನಾಗುತ್ತಿಲ್ಲ. ಸೌಂದರ್ಯ ಶೆಟ್ಟಿ ಅವರು ಕಣ್ಣೀರು ಹಾಕುವ ಪರಿಸ್ಥಿತಿ ಬಂದಿದೆ. ಸೆಪ್ಟೆಂಬರ್ 10 ಸಂಚಿಕೆಯ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ. ಮೊದಲ ವಾರವೇ ಬಿಗ್ ಬಾಸ್ ಮನೆಯಲ್ಲಿ ಈ ಪರಿ ಜಗಳ ಉಂಟಾಗಿದೆ. ಸ್ಪರ್ಧಿಗಳು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುವುದಕ್ಕೂ ಮುನ್ನವೇ ಜಗಳಕ್ಕೆ ಇಳಿದಿದ್ದಾರೆ. ಇದಕ್ಕೆಲ್ಲ ಶನಿವಾರದ ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಅವರು ಯಾವ ರೀತಿ ಪ್ರತಿಕ್ರಿಯೆ ನೀಡಬಹುದು ಎಂಬುದನ್ನು ತಿಳಿಯುವ ಕೌತುಕ ವೀಕ್ಷಕರಿಗೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us