ಗಗನ್-ತಾಂಡವ್ ರಾಮ್ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಬಿಗ್ ಬಾಸ್ ಕನ್ನಡ ಮೊದಲ ವಾರ ಪೂರ್ಣಗೊಂಡಿದ್ದು, ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಮನೆಯಲ್ಲಿ ನಿಯಮಗಳ ಉಲ್ಲಂಘನೆ ಹಾಗೂ ಸ್ಪರ್ಧಿಗಳ ನಡುವಿನ ತಾರತಮ್ಯದ ಕಿಚ್ಚು ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಬಾರಿಯ 'ವಾರದ ಕಥೆ ಕಿಚ್ಚನ ಜೊತೆ' ಸಂಚಿಕೆಯಲ್ಲಿ ನಿರೂಪಕ ಕಿಚ್ಚ ಸುದೀಪ್ ಅವರು ಸ್ಪರ್ಧಿಗಳ ನಡೆಗೆ ಭಾರೀ ಗರಂ ಆಗಿದ್ದು, ಗಗನ್ ಹಾಗೂ ತಾಂಡವ್ ರಾಮ್ ಅವರಿಗೆ ಕಠಿಣವಾಗಿ ಕ್ಲಾಸ್ ತಗೆದುಕೊಳ್ಳುವ ಸೂಚನೆ ಸಿಕ್ಕಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 13’ರಲ್ಲಿ ಮೊದಲ ವಾರದ ಪಂಚಾಯ್ತಿ ಬಂದಿದೆ. ಗಗನ್ ಚಿನ್ನಪ್ಪಗೆ ನೀಡಲಾಗಿದ್ದ ವಿಐಪಿ ಜವಾಬ್ದಾರಿ ನೀಡಲಾಗಿತ್ತು. ಆದರೆ ಅವರು ಅನುಕೂಲಕ್ಕೆ ತಕ್ಕಂತೆ ನಿಯಮಗಳನ್ನು ಬದಲಾಯಿಸಿಕೊಂಡಿರುವುದು ಸುದೀಪ್ ಅವರ ಕೆಂಗಣ್ಣಿಗೆ ಕಾರಣವಾಗಿದೆ. ಆಟದ ಮೂಲ ನಿಯಮಗಳನ್ನು ಮೂಲೆಗೆ ತಳ್ಳಿ, ತಮಗೆ ಬೇಕಾದಂತೆ ನಿರ್ಧಾರಗಳನ್ನು ತೆಗೆದುಕೊಂಡಿದ್ದನ್ನು ಸುದೀಪ್ ನೇರವಾಗಿ ಪ್ರಶ್ನಿಸಲಿದ್ದಾರೆ.
ಮತ್ತೊಂದೆಡೆ ಮನೆಯಲ್ಲಿ ‘ಕಾಮನ್ ಮ್ಯಾನ್’ ಹಾಗೂ ‘ಸೆಲೆಬ್ರಿಟಿ’ ಎಂಬ ಭೇದಭಾವ ಮತ್ತೆ ತಲೆದೂರಿದೆ. ಗಗನ್ ಹಾಗೂ ತಾಂಡವ್ ರಾಮ್ ಅವರ ನಡೆಗಳು ಮನೆಯಲ್ಲಿ ಸಾರಾಸಗಟಾಗಿ ಸಾಮಾನ್ಯ ಸ್ಪರ್ಧಿಗಳನ್ನು ಟಾರ್ಗೆಟ್ ಮಾಡುವಂತಿದೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ವೇದಿಕೆ ಮೇಲೆಯೇ ಕಿಚ್ಚ ಸುದೀಪ್ ಗಂಭೀರ ಚರ್ಚೆ ನಡೆಸಲಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಮುದ್ದಾದ ಮಗಳಿದ್ರೂ ಅವ್ನೇ ಬೇಕೆಂದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್ ಸರ್ಕ್ಯೂಟ್ಗೆ ಸಿಲಿಂಡರ್ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ

