ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11 ರಲ್ಲಿ ಈ ವಾರ ಸ್ಪರ್ಧಿಗಳು ಪರಸ್ಪರ ಕಠಿಣ ಪೈಪೋಟಿ ನೀಡಿದ್ದಾರೆ. ಒಬ್ಬರ ಮೇಲೊಬ್ಬರು ಬಿದ್ದು ಟಾಸ್ಕ್ ಆಡಿದ್ದಾರೆ. ಶಕ್ತಿಪ್ರದರ್ಶನ ಮಾಡಿದ್ದಾರೆ. ಈ ವಾರದ ಆಟದಲ್ಲಿ ಹಲವರು ನಿಯಮ ಮೀರಿದ್ದಾರೆ. ಇದೀಗ ಶನಿವಾರ ಬಂದಿದ್ದು, ಸುದೀಪ್ ಬಂದಿದ್ದಾರೆ. ಯಾರಿಗೆ ಈ ಬಾರಿ ಮಾತಿನ ಚಾಟಿ ಬೀಸಲಿದ್ದಾರೆ ಕಾದು ನೋಡಬೇಕಿದೆ.

ಬಿಗ್​ಬಾಸ್ ಕನ್ನಡ ಸೀಸನ್ 11 ಮುಗಿಯಲು ಕೆಲವೇ ದಿನಗಳು ಬಾಕಿ ಇದೆ. ಹನುಮಂತುಗೆ ಈಗಾಗೇ ಫಿನಾಲೆ ಟಿಕೆಟ್ ಸಿಕ್ಕಾಗಿದೆ. ಈ ಸೀಸನ್​ನ ಕೊನೆಯ ಕ್ಯಾಪ್ಟನ್ ಆಗಿ ಅವರು ಆಯ್ಕೆ ಆಗಿದ್ದಾರೆ. ಇಂದು ಶನಿವಾರವಾಗಿದ್ದು ವಾರದ ಪಂಚಾಯಿತಿ ನಡೆಸಿಕೊಡಲು ಸುದೀಪ್ ಬಂದಿದ್ದಾರೆ. ಈ ವಾರ ಮನೆಯ ಸ್ಪರ್ಧಿಗಳು ಬಲು ಜಿದ್ದಾಜಿದ್ದಿನಿಂದ ಗೇಮ್​ಗಳನ್ನು ಆಡಿದ್ದಾರೆ. ಒಬ್ಬರ ಮೇಲೊಬ್ಬರು ಬಿದ್ದು, ಹೊಡೆದಾಡಿಕೊಂಡು, ಬೈದಾಡಿಕೊಂಡು ಆಟ ಆಡಿದ್ದಾರೆ. ಟಾಸ್ಕ್​ಗಳಲ್ಲಿ ಕಳ್ಳಾಟ ಆಡಿದವರಿಗೆ ಚಳಿ ಬಿಡಿಸಲಿದ್ದಾರೆ ಕಿಚ್ಚ ಸುದೀಪ್, ಅದರ ಝಲಕ್ ಒಮ್ಮೆ ನೋಡಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:09 pm, Sat, 11 January 25

Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us