AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ ಟಿಆರ್​ಪಿ

ಈಗ ಹೊರ ಬಿದ್ದಿರೋದು ಕಳೆದ ವಾರದ ಟಿಆರ್​ಪಿ ಅಲ್ಲ. ಅದಕ್ಕೂ ಹಿಂದಿನ ವಾರದ ಟಿಆರ್​ಪಿ. ಕಳೆದ ವಾರ ಚೈತ್ರಾ ಅವರು ಆಟ ಆಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸುದೀಪ್ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದರು. ಆ ವಾರದ ಟಿಆರ್​ಪಿ ಖಂಡಿತವಾಗಿಯೂ ಎರಡಂಕಿ ದಾಟಲಿದೆ ಎಂಬುದು ಅನೇಕರ ಊಹೆ.

ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ ಟಿಆರ್​ಪಿ
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Nov 21, 2024 | 5:28 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ ಆರಂಭದ ದಿನಗಳಿಂದಲೂ ಒಂದಲ್ಲಾ ಒಂದು ಕಾರಣಕ್ಕೆ ಚರ್ಚೆಯಲ್ಲಿ ಇದೆ. ಜಗದೀಶ್ ಹಾಗೂ ರಂಜಿತ್ ಅವರು ಬಡಿದಾಡಿಕೊಂಡು ದೊಡ್ಮನೆಯಿಂದ ಔಟ್ ಆದರು. ಆ ವಾರ ಭರ್ಜರಿ ಟಿಆರ್​ಪಿ ಸಿಕ್ಕಿತ್ತು. ಸುದೀಪ್ ಅವರು ತಾಯಿಯನ್ನು ಕಳೆದುಕೊಂಡ ಬಳಿಕ ಒಂದು ವಾರ ಬಿಗ್ ಬಾಸ್ ವೇದಿಕೆ ಏರಿರಲಿಲ್ಲ. ಆಗ ಟಿಆರ್​ಪಿ ಕುಗ್ಗಿತ್ತು. ಅವರು ಮರಳಿದ ಬಳಿಕ ಬಿಗ್ ಬಾಸ್ ಟಿಆರ್​ಪಿ ಅಲ್ಲಿ ಏರಿಕೆ ಕಂಡಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ ಸುದೀಪ್ ಅವರ ಕೊನೆಯ ಸೀಸನ್ ಎನ್ನಲಾಗಿದೆ. ಈ ಬಗ್ಗೆ ಅವರು ಈಗಾಗಲೇ ಘೋಷಣೆ ಮಾಡಿದ್ದಾರೆ. ಅವರು ಈ ವಾರ ಖಡಕ್ ಆಗಿ ಬಿಗ್ ಬಾಸ್ ನಡೆಸಿಕೊಡುತ್ತಿದ್ದಾರೆ. ವಾರದ ದಿನಗಳಲ್ಲಿ 7.4 ಟಿವಿಆರ್​, ಶನಿವಾರ 8.7 ಟಿವಿಆರ್​ ಹಾಗೂ ಭಾನುವಾರ 9.1 ಟಿವಿಆರ್ ಸಿಕ್ಕಿದೆ. ಇದು ನಗರ ಭಾಗದ ಟಿಆರ್​ಪಿ ಮಾತ್ರ. ಒಂದೊಮ್ಮೆ ರಾಜ್ಯದ ಸಂಪೂರ್ಣ ಟಿಆರ್​ಪಿ ಸೇರಿದರೆ ಇನ್ನೂ ಹೆಚ್ಚಲಿದೆ.

ಈಗ ಹೊರ ಬಿದ್ದಿರೋದು ಕಳೆದ ವಾರದ ಟಿಆರ್​ಪಿ ಅಲ್ಲ. ಅದಕ್ಕೂ ಹಿಂದಿನ ವಾರದ ಟಿಆರ್​ಪಿ. ಕಳೆದ ವಾರ ಚೈತ್ರಾ ಅವರು ಆಟ ಆಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸುದೀಪ್ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದರು. ಆ ವಾರದ ಟಿಆರ್​ಪಿ ಖಂಡಿತವಾಗಿಯೂ ಎರಡಂಕಿ ದಾಟಲಿದೆ ಎಂಬುದು ಅನೇಕರ ಊಹೆ.

ಇದನ್ನೂ ಓದಿ: ‘ನಿಮ್ಮಿಂದ ಟಿಆರ್​ಪಿ ಬರೊಲ್ಲ’: ಸ್ಪರ್ಧಿಗಳ ಭ್ರಮೆ ದೂರ ಮಾಡಿದ ಸುದೀಪ್

ಬಿಗ್ ಬಾಸ್ ಈಗಾಗಲೇ 50 ದಿನಗಳನ್ನು ಪೂರ್ಣಗೊಳಿಸಿದೆ. ಈ ಬಾರಿ 50ನೇ ದಿನಕ್ಕೆ ಇಬ್ಬರು ವೈಲ್ಡ್ ಕಾರ್ಡ್ ಆಟಗಾರರ ಎಂಟ್ರಿ ಆಗಿದೆ. ಇದರಿಂದ ಆಟದ ರೋಚಕತೆ ಮತ್ತಷ್ಟು ಹೆಚ್ಚಿದೆ. ಶೋಭಾ ಶೆಟ್ಟಿ ಅವರು ಜೋರು ಧ್ವನಿಯಲ್ಲಿ ಮಾತನಾಡಿ ಎಲ್ಲರನ್ನೂ ಬೆಚ್ಚಿ ಬೀಳಿಸುತ್ತಿದ್ದಾರೆ.

ಇನ್ನು ಧಾರಾವಾಹಿಗಳ ಟಿಆರ್​ಪಿ ವಿಚಾರಕ್ಕೆ ಬಂದರೆ, ಮೊದಲ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಎರಡನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದೆ. ಮೂರನೇ ಸ್ಥಾನದಲ್ಲಿ ‘ಅಮೃತಧಾರೆ ಧಾರಾವಾಹಿ ಇದೆ. ಈ ಮೂರು ಧಾರಾವಾಹಿಗಳು ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿವೆ ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:01 pm, Thu, 21 November 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್