AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ ಟಿಆರ್​ಪಿ

ಈಗ ಹೊರ ಬಿದ್ದಿರೋದು ಕಳೆದ ವಾರದ ಟಿಆರ್​ಪಿ ಅಲ್ಲ. ಅದಕ್ಕೂ ಹಿಂದಿನ ವಾರದ ಟಿಆರ್​ಪಿ. ಕಳೆದ ವಾರ ಚೈತ್ರಾ ಅವರು ಆಟ ಆಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸುದೀಪ್ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದರು. ಆ ವಾರದ ಟಿಆರ್​ಪಿ ಖಂಡಿತವಾಗಿಯೂ ಎರಡಂಕಿ ದಾಟಲಿದೆ ಎಂಬುದು ಅನೇಕರ ಊಹೆ.

ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ ಟಿಆರ್​ಪಿ
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Nov 21, 2024 | 5:28 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ ಆರಂಭದ ದಿನಗಳಿಂದಲೂ ಒಂದಲ್ಲಾ ಒಂದು ಕಾರಣಕ್ಕೆ ಚರ್ಚೆಯಲ್ಲಿ ಇದೆ. ಜಗದೀಶ್ ಹಾಗೂ ರಂಜಿತ್ ಅವರು ಬಡಿದಾಡಿಕೊಂಡು ದೊಡ್ಮನೆಯಿಂದ ಔಟ್ ಆದರು. ಆ ವಾರ ಭರ್ಜರಿ ಟಿಆರ್​ಪಿ ಸಿಕ್ಕಿತ್ತು. ಸುದೀಪ್ ಅವರು ತಾಯಿಯನ್ನು ಕಳೆದುಕೊಂಡ ಬಳಿಕ ಒಂದು ವಾರ ಬಿಗ್ ಬಾಸ್ ವೇದಿಕೆ ಏರಿರಲಿಲ್ಲ. ಆಗ ಟಿಆರ್​ಪಿ ಕುಗ್ಗಿತ್ತು. ಅವರು ಮರಳಿದ ಬಳಿಕ ಬಿಗ್ ಬಾಸ್ ಟಿಆರ್​ಪಿ ಅಲ್ಲಿ ಏರಿಕೆ ಕಂಡಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ ಸುದೀಪ್ ಅವರ ಕೊನೆಯ ಸೀಸನ್ ಎನ್ನಲಾಗಿದೆ. ಈ ಬಗ್ಗೆ ಅವರು ಈಗಾಗಲೇ ಘೋಷಣೆ ಮಾಡಿದ್ದಾರೆ. ಅವರು ಈ ವಾರ ಖಡಕ್ ಆಗಿ ಬಿಗ್ ಬಾಸ್ ನಡೆಸಿಕೊಡುತ್ತಿದ್ದಾರೆ. ವಾರದ ದಿನಗಳಲ್ಲಿ 7.4 ಟಿವಿಆರ್​, ಶನಿವಾರ 8.7 ಟಿವಿಆರ್​ ಹಾಗೂ ಭಾನುವಾರ 9.1 ಟಿವಿಆರ್ ಸಿಕ್ಕಿದೆ. ಇದು ನಗರ ಭಾಗದ ಟಿಆರ್​ಪಿ ಮಾತ್ರ. ಒಂದೊಮ್ಮೆ ರಾಜ್ಯದ ಸಂಪೂರ್ಣ ಟಿಆರ್​ಪಿ ಸೇರಿದರೆ ಇನ್ನೂ ಹೆಚ್ಚಲಿದೆ.

ಈಗ ಹೊರ ಬಿದ್ದಿರೋದು ಕಳೆದ ವಾರದ ಟಿಆರ್​ಪಿ ಅಲ್ಲ. ಅದಕ್ಕೂ ಹಿಂದಿನ ವಾರದ ಟಿಆರ್​ಪಿ. ಕಳೆದ ವಾರ ಚೈತ್ರಾ ಅವರು ಆಟ ಆಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸುದೀಪ್ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದರು. ಆ ವಾರದ ಟಿಆರ್​ಪಿ ಖಂಡಿತವಾಗಿಯೂ ಎರಡಂಕಿ ದಾಟಲಿದೆ ಎಂಬುದು ಅನೇಕರ ಊಹೆ.

ಇದನ್ನೂ ಓದಿ: ‘ನಿಮ್ಮಿಂದ ಟಿಆರ್​ಪಿ ಬರೊಲ್ಲ’: ಸ್ಪರ್ಧಿಗಳ ಭ್ರಮೆ ದೂರ ಮಾಡಿದ ಸುದೀಪ್

ಬಿಗ್ ಬಾಸ್ ಈಗಾಗಲೇ 50 ದಿನಗಳನ್ನು ಪೂರ್ಣಗೊಳಿಸಿದೆ. ಈ ಬಾರಿ 50ನೇ ದಿನಕ್ಕೆ ಇಬ್ಬರು ವೈಲ್ಡ್ ಕಾರ್ಡ್ ಆಟಗಾರರ ಎಂಟ್ರಿ ಆಗಿದೆ. ಇದರಿಂದ ಆಟದ ರೋಚಕತೆ ಮತ್ತಷ್ಟು ಹೆಚ್ಚಿದೆ. ಶೋಭಾ ಶೆಟ್ಟಿ ಅವರು ಜೋರು ಧ್ವನಿಯಲ್ಲಿ ಮಾತನಾಡಿ ಎಲ್ಲರನ್ನೂ ಬೆಚ್ಚಿ ಬೀಳಿಸುತ್ತಿದ್ದಾರೆ.

ಇನ್ನು ಧಾರಾವಾಹಿಗಳ ಟಿಆರ್​ಪಿ ವಿಚಾರಕ್ಕೆ ಬಂದರೆ, ಮೊದಲ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಎರಡನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದೆ. ಮೂರನೇ ಸ್ಥಾನದಲ್ಲಿ ‘ಅಮೃತಧಾರೆ ಧಾರಾವಾಹಿ ಇದೆ. ಈ ಮೂರು ಧಾರಾವಾಹಿಗಳು ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿವೆ ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:01 pm, Thu, 21 November 24

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ