ಎಲಿಮಿನೇಷನ್​ಗೂ ಮುನ್ನ ಕಣ್ಣೀರು ಹಾಕಿದ ವರ್ತೂರು ಸಂತೋಷ್​, ತುಕಾಲಿ ಸಂತೋಷ್​

Updated on: Jan 14, 2024 | 9:32 AM

ಬಿಗ್​ ಬಾಸ್​ ಶೋನಲ್ಲಿ ತುಕಾಲಿ ಸಂತೋಷ್​ ಮತ್ತು ವರ್ತೂರು ಸಂತೋಷ್​ ಅವರು ಆತ್ಮೀಯವಾಗಿದ್ದರು. ಇಬ್ಬರೂ ಜೊತೆಯಾಗಿ ಹೆಚ್ಚು ಸಮಯ ಕಳೆಯುತ್ತಿದ್ದರು. ಎಮಿಲಿನೇಷನ್​ ವೇಳೆ ಇಬ್ಬರೂ ಎಮೋಷನಲ್​ ಆಗಿದ್ದಾರೆ. ಅವರು ಕಣ್ಣೀರು ಹಾಕಿದ್ದು ನೋಡಿ ಇನ್ನುಳಿದ ಮನೆ ಮಂದಿ ಕೂಡ ಭಾವುಕರಾಗಿದ್ದಾರೆ.

ಕಿರುತೆರೆ ಪ್ರೇಕ್ಷಕರ ಮೆಚ್ಚಿನ ಶೋ ಆಗಿರುವ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada) ಈಗ ಕೊನೇ ಹಂತಕ್ಕೆ ಬಂದಿದೆ. ಇನ್ನು ಕೆಲವೇ ದಿನಗಳಲ್ಲಿ ಫಿನಾಲೆ ನಡೆಯಲಿದೆ. ಈ ವಾರ ಇದ್ದ 8 ಸದಸ್ಯರ ಪೈಕಿ ಒಬ್ಬರ ಎಲಿಮಿನೇಷನ್​ ಆಗಿದೆ. ವರ್ತೂರು ಸಂತೋಷ್​ ಮತ್ತು ತುಕಾಲಿ ಸಂತೋಷ್​ (Tukali Santhosh) ಅವರಲ್ಲಿ ಒಬ್ಬರು ಔಟ್​ ಆಗುವುದು ಖಚಿತ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ. ಬಿಗ್​ ಬಾಸ್​ ಶೋನಲ್ಲಿ ತುಕಾಲಿ ಸಂತೋಷ್​ ಮತ್ತು ವರ್ತೂರು ಸಂತೋಷ್​ (Varthur Santhosh) ಅವರು ತುಂಬಾ ಆತ್ಮೀಯವಾಗಿದ್ದರು. ಇಬ್ಬರೂ ಜೊತೆಯಾಗಿ ಹೆಚ್ಚು ಸಮಯ ಕಳೆಯುತ್ತಿದ್ದರು. ಕೊನೇ ಹಂತ ಬಂದಾಗ ಇಬ್ಬರೂ ಎಮೋಷನಲ್​ ಆಗಿದ್ದಾರೆ. ಈವರೆಗೆ ತಾವು ಕಳೆದ ದಿನಗಳನ್ನು ಅವರು ಮೆಲುಕು ಹಾಕಿದ್ದಾರೆ. ತುಕಾಲಿ ಸಂತೋಷ್​ ಮತ್ತು ವರ್ತೂರು ಸಂತೋಷ್​ ಕಣ್ಣೀರು ಹಾಕಿದ್ದು ನೋಡಿ ಇನ್ನುಳಿದ ಮನೆ ಮಂದಿ ಕೂಡ ಭಾವುಕರಾಗಿದ್ದಾರೆ. ಈ ಪ್ರೋಮೋವನ್ನು ‘ಕಲರ್ಸ್​ ಕನ್ನಡ’ ವಾಹಿನಿ ಹಂಚಿಕೊಂಡಿದೆ. ಜನವರಿ 14ರಂದು ಈ ಸಂಚಿಕೆ ಪ್ರಸಾರ ಆಗಲಿದೆ. ‘ಕಲರ್ಸ್​ ಕನ್ನಡ’ ಜೊತೆ ‘ಜಿಯೋ ಸಿನಿಮಾ’ ಒಟಿಟಿಯಲ್ಲೂ ಉಚಿತವಾಗಿ ಶೋ ನೋಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More