ಕಳಪೆ ಆಟವಾಡಿ ಕೂಲ್​ ಆಗಿರುವ ತನಿಷಾ ಕುಪ್ಪಂಡ; ಇದನ್ನೆಲ್ಲ ನೋಡಿ ಗರಂ ಆದ ವಿನಯ್​ ಗೌಡ

ತನಿಷಾ ಕುಪ್ಪಂಡ ಅವರು ಆಟದಲ್ಲಿ ಕಳಪೆ ಪ್ರದರ್ಶನ ತೋರಿದ್ದಾರೆ. ಟಾಸ್ಕ್​ನ ಗಂಭೀರತೆಯನ್ನು ಅವರು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ ಎಂದು ವಿನಯ್​ ಗೌಡ ಗರಂ ಆಗಿದ್ದಾರೆ. ಇಬ್ಬರ ನಡುವೆ ಕ್ಲ್ಯಾಶ್​ ಏರ್ಪಡುವ ಸಾಧ್ಯತೆ ಇದೆ. ಈ ಮೊದಲು ವಿನಯ್​ ಗೌಡ ಮತ್ತು ಸಂಗೀತಾ ಶೃಂಗೇರಿ ಅವರು ಕಿತ್ತಾಡಿಕೊಂಡಿದ್ದರು.

ಕಳಪೆ ಆಟವಾಡಿ ಕೂಲ್​ ಆಗಿರುವ ತನಿಷಾ ಕುಪ್ಪಂಡ; ಇದನ್ನೆಲ್ಲ ನೋಡಿ ಗರಂ ಆದ ವಿನಯ್​ ಗೌಡ
|

Updated on: Nov 15, 2023 | 6:57 PM

ಬಿಗ್​ ಬಾಸ್​ (Bigg Boss Kannada) ಮನೆಯಲ್ಲಿ 6ನೇ ವಾರದಲ್ಲಿ ಆಟ ಆಡುತ್ತಿರುವ ಸ್ಪರ್ಧಿಗಳಿಗೆ ಕುಟುಂಬದವರ ನೆನಪು ಕಾಡುತ್ತಿದೆ. ಈಗ ಎಲ್ಲರ ಮನೆಯಿಂದಲೂ ಪತ್ರಗಳು ಬಂದಿವೆ. ಆದರೆ ಆ ಲೆಟರ್​ ಪಡೆದುಕೊಳ್ಳಲು ಟಾಸ್ಕ್​ ಗೆಲ್ಲಬೇಕು. ತನಿಷಾ ಕುಪ್ಪಂಡ (Tanisha Kuppanda) ಅವರು ಆಟದಲ್ಲಿ ಕಳಪೆ ಪ್ರದರ್ಶನ ತೋರಿದ್ದಾರೆ. ಅವರಿಂದಾಗಿ ಇತರರಿಗೆ ಪತ್ರ ಮಿಸ್​ ಆಗುವ ಸಾಧ್ಯತೆ ಇದೆ. ಟಾಸ್ಕ್​ನ ಗಂಭೀರತೆಯನ್ನು ಅವರು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ ಎಂದು ವಿನಯ್​ ಗೌಡ (Vinay Gowda) ಗರಂ ಆಗಿದ್ದಾರೆ. ಈ ಸಂಚಿಕೆ ನವೆಂಬರ್​ 15ರಂದು ರಾತ್ರಿ 9.30ಕ್ಕೆ ಕಲರ್ಸ್​ ಕನ್ನಡದಲ್ಲಿ ಪ್ರಸಾರ ಆಗಲಿದೆ. ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಉಚಿತವಾಗಿ ದಿನ 24 ಗಂಟೆಯೂ ಲೈವ್​ ನೋಡಲು ಅವಕಾಶ ಇದೆ. ತನಿಷಾ ಕುಪ್ಪಂಡ ಅವರು ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ಆಟಕ್ಕೆ ಇದು ಕೂಡ ಮುಳುವಾಗುವ ಸಾಧ್ಯತೆ ದಟ್ಟವಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್