Karthik Mahesh: ಅಪ್ಪು ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದ ಕಾರ್ತಿಕ್ ಮಹೇಶ್

|

Updated on: Feb 05, 2024 | 2:12 PM

ಕಾರ್ತಿಕ್ ಮಹೇಶ್ ಬಿಡುವು ಮಾಡಿಕೊಂಡು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ರಾಜ್​ಕುಮಾರ್ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಕೆ ಮಾಡಿದ್ದಾರೆ. ಪುನೀತ್ ಅವರು ಅನೇಕರಿಗೆ ಮಾದರಿ. ಈ ಕಾರಣಕ್ಕೆ ಅವರ ಸಮಾಧಿಗೆ ಕಾರ್ತಿಕ್ ಭೇಟಿ ಕೊಟ್ಟಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಕಾರ್ತಿಕ್ ಮಹೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ (BBk 10) ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಇದಾದ ಬಳಿಕ ಅವರು ನಾನಾ ಕಡೆ ಭೇಟಿ ನೀಡುತ್ತಿದ್ದಾರೆ. ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಕೆಲವು ಸಿನಿಮಾ ಕಾರ್ಯಕ್ರಮಗಳಿಗೂ ಅವರಿಗೆ ಆಹ್ವಾನ ಬರುತ್ತಿದೆ. ಈಗ ಅವರು ಬಿಡುವು ಮಾಡಿಕೊಂಡು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ರಾಜ್​ಕುಮಾರ್ ಅವರ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ. ಪುನೀತ್ ಅವರು ಅನೇಕರಿಗೆ ಮಾದರಿ. ಈ ಕಾರಣಕ್ಕೆ ಅವರ ಸಮಾಧಿಗೆ ಕಾರ್ತಿಕ್ ಭೇಟಿ ನೀಡಿದ್ದಾರೆ. ಕಾರ್ತಿಕ್ ಅವರು ‘ಬಿಗ್ ಬಾಸ್’ನಲ್ಲಿ ಸಾಕಷ್ಟು ಗಮನ ಸೆಳೆದರು. 112 ದಿನಗಳ ಕಾಲ ಅವರು ದೊಡ್ಮನೆಯಲ್ಲಿ ಇದ್ದು ಕಪ್ ಗೆದ್ದಿದ್ದಾರೆ. ಇದರ ಜೊತೆಗೆ ಒಂದು ಬೈಕ್ ಹಾಗೂ ಕಾರು ಕೂಡ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us on