ಸುಲ್ತಾನಗಂಜ್ ಪುರಸಭೆಯಲ್ಲಿ ಗುಂಡಿನ ದಾಳಿ; ಇಒ ಸಾವು, ಅಧ್ಯಕ್ಷರ ಸ್ಥಿತಿ ಗಂಭೀರ

Updated on: Apr 28, 2026 | 9:44 PM

ಭಾಗಲ್ಪುರದ ಸುಲ್ತಾನಗಂಜ್ ಪುರಸಭೆ ಕಚೇರಿಯಲ್ಲಿ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಸಾವನ್ನಪ್ಪಿದ್ದಾರೆ. ಪುರಸಭೆಯ ಅಧ್ಯಕ್ಷರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಆತಂಕವನ್ನು ಮೂಡಿಸಿದ್ದು, ತನಿಖೆಯನ್ನು ತೀವ್ರಗೊಳಿಸಲು ಪೊಲೀಸರು ಹಲವು ತಂಡಗಳನ್ನು ರಚಿಸಿದ್ದಾರೆ. ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸಿಇಒ ಮತ್ತು ಅಧ್ಯಕ್ಷರ ಮೇಲೆ ಗುಂಡು ಹಾರಿಸಲಾಯಿತು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಪ್ರಕರಣದ ತನಿಖೆಗಾಗಿ ಹಲವಾರು ತಂಡಗಳನ್ನು ರಚಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ಭಾಗಲ್ಪುರ, ಏಪ್ರಿಲ್ 28: ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿರುವ ಸುಲ್ತಾನಗಂಜ್ ಪುರಸಭೆ ಕಚೇರಿಯಲ್ಲಿ ಇಂದು ಹಗಲು ಹೊತ್ತಿನಲ್ಲಿಯೇ ಮನಬಂದಂತೆ ಗುಂಡು ಹಾರಿಸಿದ ಘಟನೆ ನಡೆದಿದೆ. ಈ ದಾಳಿಯಲ್ಲಿ ಪುರಸಭೆ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಭೂಷಣ್ ಕುಮಾರ್ ಸಾವನ್ನಪ್ಪಿದ್ದು, ಅಧ್ಯಕ್ಷ ರಾಜ್‌ಕುಮಾರ್ ಗುಡ್ಡು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಇಡೀ ಪ್ರದೇಶದಲ್ಲಿ ಆತಂಕ ಉಂಟುಮಾಡಿತು. ಬುಲೆಟ್ ಬೈಕ್​ಗಳಲ್ಲಿ ಬಂದ ಐವರು ದಾಳಿಕೋರರು ಯಾವುದೇ ಮುನ್ಸೂಚನೆ ನೀಡದೆ ಗುಂಡು (firing) ಹಾರಿಸಿದರು. ಸಿಇಒ ಮತ್ತು ಅಧ್ಯಕ್ಷರ ಮೇಲೆ ಗುಂಡು ಹಾರಿಸಲಾಯಿತು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಪ್ರಕರಣದ ತನಿಖೆಗಾಗಿ ಹಲವಾರು ತಂಡಗಳನ್ನು ರಚಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 28, 2026 09:03 PM
Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More